BREAKING NEWS

ಮೋದಿ ಸರ್ಕಾರ ಆರ್ಥಿಕ ಬೆಳವಣಿಗೆಯ ದತ್ತಾಂಶಗಳನ್ನು ತಿರುಚುತ್ತಿದೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ದೇಶದಲ್ಲಿ ಪ್ರತಿ ಮನೆಯ ಆರ್ಥಿಕ ಉಳಿತಾಯ 50 ವಷಗಳ ಹಿಂದಿನ ಪರಿಸ್ಥಿತಿಗಿಂತಲೂ ಕೆಳಮಟ್ಟಕ್ಕೆ ಕುಸಿದಿದ್ದು, ದೈನಂದಿನ ಅಗತ್ಯತೆಗಳ ವೆಚ್ಚ ದುಬಾರಿಯಾಗಿದೆ. ಇದನ್ನು ಮರೆಮಾಚಲು ಕೇಂದ್ರ ಬಿಜೆಪಿ ಸರ್ಕಾರ ನಾನಾ ವಿವಾದಗಳನ್ನು ಸೃಷ್ಟಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ಅವರ ಸರ್ಕಾರ ಆರ್ಥಿಕ ಬೆಳವಣಿಗೆಯ ದತ್ತಾಂಶಗಳನ್ನು ತಿರುಚುತ್ತಿದೆ ಎಂದು ಕಿಡಿಕಾರಿದ್ದಾರೆ.

ವೈದ್ಯಕೀಯ ಕ್ಷೇತ್ರದ ವೆಚ್ಚಗಳು ಏಷ್ಯಾ ದೇಶಗಳಲ್ಲೇ ಭಾರತದಲ್ಲಿ ಅತ್ಯಧಿಕವಾಗಿವೆ. ಕಳೆದ 5 ವರ್ಷಗಳಲ್ಲಿ ಚಿಕಿತ್ಸೆಯ ವೆಚ್ಚ ದುಪ್ಪಟ್ಟುಗೊಂಡಿದೆ. ಶಿಕ್ಷಣ ಕ್ಷೇತ್ರದ ವೆಚ್ಚಗಳು ಶೇ.12 ಕ್ಕಿಂತ ದುಬಾರಿಯಾಗಿವೆ ಎಂದು ವಿವರಿಸಿದ್ದಾರೆ.

ದೇಶದ ಶೇ. 74 ರಷ್ಟು ಜನ ಆರೋಗ್ಯಕರ ಆಹಾರಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ತರಕಾರಿಗಳ ಬೆಲೆ ಶೇ. 24 ರಷ್ಟು ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮನೆಗಳ ನಿವ್ವಳ ಆಸ್ತಿ 2021 ರಲ್ಲಿ 22.8 ರಷ್ಟು ಶತಕೋಟಿಯಷ್ಟಿತ್ತು. 2022 ರಲ್ಲಿ ಅದು 16.96 ಶತಕೋಟಿ, ಪ್ರಸಕ್ತ ಸಾಲಿಗೆ 13.76 ಶತಕೋಟಿಗೆ ಕುಸಿದಿದೆ. ಮೋದಿ ಸರ್ಕಾರ ಈ ದತ್ತಾಂಶಗಳನ್ನ ಮರೆಮಾಚುತ್ತಿದೆ. ಅದೇ ಕಾರಣಕ್ಕಾಗಿ ಭಾರತ/ಇಂಡಿಯಾ, ಸನಾತನ ಧರ್ಮ ವಿವಾದಗಳು, ಹೊಸ ಸಂಸತ್ ಉದ್ಘಾಟನೆ, ಜಿ20 ಸಮ್ಮೇಳನದಂತಹ ವಿಷಯಗಳನ್ನು ವೈಭವೀಕರಿಸಲಾಗುತ್ತದೆ. ಈ ಎಲ್ಲಾ ವಿಷಯಗಳು ಮೂಲ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಗಮನ ಸೆಳೆಯುವಂತೆ ಮಾಡುತ್ತಿವೆ ಎಂದು ಆರೋಪಿಸಿದರು.

ವೈದ್ಯಕೀಯ, ಶಿಕ್ಷಣದ ವೆಚ್ಚ ದುಬಾರಿಯಾಗಿರುವುದು ತರಕಾರಿ ಬೆಲೆ ಹೆಚ್ಚಳ, ಗೃಹ ಆದಾಯ ಕುಸಿತದಂತಹ ಸಮಸ್ಯೆಗಳ ಬಗ್ಗೆ ಬಿಜೆಪಿ ಸರ್ಕಾರ ಎಂದಿಗೂ ಬಾಯಿ ಬಿಡುತ್ತಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

andolanait

Recent Posts

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

3 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

32 mins ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

12 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

12 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

12 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

12 hours ago