BREAKING NEWS

ಮೋದಿ ಪದವಿ: ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್‌ ಕೋರ್ಟ್ ಸಮನ್ಸ್

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್‌ ಅವರಿಗೆ ಇಲ್ಲಿನ ನ್ಯಾಯಾಲಯ ಶನಿವಾರ ಸಮನ್ಸ್‌ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ, ಕೇಜ್ರಿವಾಲ್‌ ಹಾಗೂ ಸಂಜಯ್‌ ಸಿಂಗ್‌ ಅವರು ಮೇ 23ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದರು.

ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಗುಜರಾತ್‌ ಹೈಕೋರ್ಟ್‌ ಆದೇಶ ನೀಡಿತ್ತು. ಇದರ ಬೆನ್ನಲ್ಲೇ, ಏಪ್ರಿಲ್‌ 1 ಹಾಗೂ 2 ರಂದು ಕೇಜ್ರಿವಾಲ್‌ ಹಾಗೂ ಸಂಜಯ್‌ ಸಿಂಗ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ನಂತರ, ಈ ಇಬ್ಬರ ವಿರುದ್ಧ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪೀಯೂಷ್ ಪಟೇಲ್ ಅವರು ಏಪ್ರಿಲ್ 12ರಂದು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

andolanait

Recent Posts

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

6 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

27 mins ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

42 mins ago

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

1 hour ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

3 hours ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

4 hours ago