BREAKING NEWS

ಅಸ್ಸಾಂನಲ್ಲಿ 14,300 ಕೋಟಿ ರೂ.ಗಳ ಕಾಮಗಾರಿಗಳಿಗೆ ಚಾಲನೆ ನೀಡಿದ ಮೋದಿ

ಗುವಾಹಟಿ – ಬಿಹು ನೃತ್ಯ ಪ್ರದರ್ಶನದ ವೀಕ್ಷಣೆಗಾಗಿ ಆಸ್ಸಾಂಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14.300 ಕೋಟಿ ರೂ.ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಬಿಹು ನೃತ್ಯಗಾರರು ಮಾಡುವ ವರ್ಣರಂಜಿತ ಕಾರ್ಯಕ್ರಮದ ವೀಕ್ಷಣೆಗೆ ಅಸ್ಸಾಂಗೆ ಆಗಮಿಸಿರುವ ಮೋದಿ ಅವರನ್ನು ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಸ್ವಾಗತಿಸಿದರು.

ಬ್ರಹ್ಮಪುತ್ರದ ಬಾರ್ಡ್ ಡಾ ಭೂಪೇನ್ ಹಜಾರಿಕಾ ಅವರ ಈ ಅಮರ ಹಾಡು ಪ್ರತಿಯೊಬ್ಬ ಅಸ್ಸಾಮಿ ಜನರ ಭಾವನೆಯನ್ನು ಪ್ರತಿಧ್ವನಿಸುತ್ತದೆ. ಬಿಹುವನ್ನು ಆಚರಿಸಲು ನಾನು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜೀ ಅವರನ್ನು ಅಸ್ಸಾಂಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಅಸ್ಸಾಂ ಸಿಎಂ ಬಿಸ್ವಾ ಟ್ವೀಟ್ ಮಾಡಿದ್ದಾರೆ.‌

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು 14,300 ಕೋಟಿ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಮ್ರೂಪ್‍ನಲ್ಲಿ 500 ಟಿಪಿಡಿ ಮೆಂಥಾಲ್ ಸ್ಥಾವರದ ಕಾರ್ಯಾರಂಭ, ಪಲಾಶ್ಬರಿ ಮತ್ತು ಸುಲ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಮೇಲಿನ ಸೇತುವೆ ಮತ್ತು ರಂಗ್ ಘರ್, ಶಿವಸಾಗರದ ಸೌಂದರ್ಯೀಕರಣ ಕಾಮಗಾರಿಗಳು ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳು ಲೋಕಾರ್ಪಣೆಗೊಳ್ಳಲಿವೆ.

ಇದೇ ಸಂದರ್ಭದಲ್ಲಿ ಮೋದಿ ಅವರು ಅಸ್ಸಾಂ ಅಡ್ವಾನ್ಸ್‍ಡ್ ಹೆಲ್ತ್ ಕೇರ್ ಇನ್ನೋವೇಶನ್ ಇನ್ಸ್ಟಿಟ್ಯೂಟ್‍ಗೆ ಅಡಿಪಾಯವನ್ನು ಹಾಕುತ್ತಾರೆ ಮತ್ತು ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್‍ಗಳನ್ನು ವಿತರಿಸುವ ಮೂಲಕ ‘ಆಪ್ಕೆ ದ್ವಾರ ಆಯುಷ್ಮಾನ್’ ಅಭಿಯಾನಕ್ಕೂ ಚಾಲನೆ ನೀಡಲಿದ್ದಾರೆ.
ರೊಂಗಾಲಿ ಬಿಹುವನ್ನು ಪ್ರತಿ ವರ್ಷ ಬೋಹಾಗ್ ತಿಂಗಳ ಮೊದಲ ವಾರದಲ್ಲಿ (ಏಪ್ರಿಲ್ ಮಧ್ಯದಲ್ಲಿ) ಆಚರಿಸಲಾಗುತ್ತದೆ, ರೊಂಗಾಲಿ ಅಥವಾ ಬೋಹಾಗ್ ಬಿಹು ಅಸ್ಸಾಮಿ ಹೊಸ ವರ್ಷವನ್ನು ಘೋಷಿಸುತ್ತದೆ ಮತ್ತು ಸಮುದಾಯದಲ್ಲಿ ವ್ಯಾಪಕವಾಗಿ ಆಚರಿಸಲಾಗುತ್ತದೆ.

lokesh

Recent Posts

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

2 mins ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

7 mins ago

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

1 hour ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

2 hours ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

2 hours ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

3 hours ago