BREAKING NEWS

ಮೈಸೂರಿನಲ್ಲಿ ಮೋದಿ ರೋಡ್ ಶೋ: ಪ್ರಧಾನಿ ನೋಡಲು ಮುಗಿಬಿದ್ದ ಜನಸಾಗರ.!

ಮೈಸೂರು: ಕರ್ನಾಟಕದಲ್ಲಿ ಪ್ರಧಾನಿ ಮೋದಿ ಮೇನಿಯಾ ಬಿಜೆಪಿ ಉತ್ಸಾಹ ಹೆಚ್ಚಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಮೋದಿ, ನಿನ್ನೆ ಬೆಂಗಳೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದರು. ಇದೀಗ ಮೈಸೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.

ಬೇಲೂರಿನಿಂದ ಮೈಸೂರುಗೆ ತೆರಳಿದೆ ಮೋದಿ, ರೋಡ್ ಶೋ ನಡೆಸಿದ್ದಾರೆ. ದಾರಿಯುದ್ದಕ್ಕೂ ಜನರು ಮೋದಿಗೆ ಹೂಮಳೆ ಸ್ವಾಗತ ನೀಡಿದ್ದಾರೆ. ಹಳೇ ಮೈಸೂರು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿರುವ ಮೋದಿ, ಸಾಂಸ್ಕೃತಿಕ ನಗರಿಯಲ್ಲಿ 4.3 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ.

ಮೈಸೂರಿನ ಓವಲ್ ಮೈದಾನಕ್ಕೆ ಆಗಮಿಸಿದ ಮೋದಿ ಕಾರಿನ ಮೂಲಕ ಮೈಸೂರು ವಿವಿ ಕ್ರಾಫರ್ಡ್ ಹಾಲ್‌ಗೆ ತೆರಳಿದರು. ವಿದ್ಯಾಪೀಠ ವೃತ್ತದಲ್ಲಿ ನಿಂತಿದ್ದ ತೆರೆದ ವಾಹನ ಏರಿದ ಮೋದಿಯನ್ನು ಸಚಿವ ರಾಮದಾಸ್ ಮೈಸೂರು ಪೇಟ ಹಾಗೂ ಕೇಸರಿ ಶಾಲು ತೊಡಿಸಿ ಸ್ವಾಗತಿಸಿದರು. ಬಳಿಕ ಮೋದಿ ಅಬ್ಬದ ರೋಡ್ ಶೋ ಆರಂಭಗೊಂಡಿತು.

ಮೋದಿ ಜೊತೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆಎಸ್ ಈಶ್ವರಪ್ಪ, ಎಸ್ ಎ ರಾಮದಾಸ್ ತೆರದ ವಾಹನದ ಮೂಲಕ ರೋಡ್ ಶೋನಲ್ಲಿ ಪಾಲ್ಗೊಂಡರು. ಮೋದಿ ರೋಡ್ ಶೋ ನೋಡಲು ಜನಸಾಗರವೇ ಹರಿದು ಬಂದಿತ್ತು. ಕಲಾ ತಂಡಗಳ ಪ್ರದರ್ಶನ ರೋಡ್ ಶೋ ಮೆರುಗು ಹೆಚ್ಚಿಸಿತ್ತು. ನಮ್ಮ ಮೋದಿ ನಮ್ಮ ಹೆಮ್ಮೆ ಸೇರಿದಂತೆ ಹಲವು ಪ್ಲೇಕಾರ್ಡ್‌ಗಳು, ಮೋದಿ ಮೋದಿ ಜಯಘೋಷ ಮೊಳಗಿತ್ತು.

ನಿನ್ನೆ ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ನಡೆಸಿದ್ದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಬೆಂಗಳೂರಲ್ಲಿ ಭರ್ಜರಿ ರೋಡ್‌ಶೋ ನಡೆಸಿದರು. ದೆಹಲಿಯಿಂದ ವಿಶೇಷವಾಗಿ ತರಿಸಲಾದ ತೆರದ ವಾಹನವು ಬುಲೆಟ್‌ಫ್ರೂಫ್‌ನಿಂದ ಕೂಡಿತು.

ಮಾಗಡಿ ರೋಡ್‌ ನೈಸ್‌ ಜಂಕ್ಷನ್‌ನಿಂದ ಆರಂಭಗೊಂಡ ರೋಡ್‌ ಶೋ ಸುಮನಹಳ್ಳಿ ಜಂಕ್ಷನ್‌ವರೆಗೆ ಸುಮಾರು 5.3 ಕಿ.ಮೀ. ನಡೆಯಿತು. ಸುಮಾರು ಒಂದು ಗಂಟೆ ಕಾಲ ನಡೆದ ರೋಡ್‌ ಶೋ ವೇಳೆ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳಲು ರಸ್ತೆಗಳ ಇಕ್ಕೆಲಗಳಲ್ಲಿ ಜನರು ನೆರೆದಿದ್ದರು. ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ಮೇಲೆ ಹೂವಿನ ಮಳೆಗರೆದು ಜೈಕಾರ ಕೂಗಿದರು. ರೋಡ್‌ಶೋನಲ್ಲಿ ಜನಸಾಗರವೇ ಹರಿದು ಬಂದಿತು.

ಬೆಳಗಾವಿಯಲ್ಲಿ ಪ್ರಚಾರ ಮುಗಿಸಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ ಮೋದಿ, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಬಳಿಯ ಹೆಲಿಪ್ಯಾಡ್‌ಗೆ ಬಂದಿಳಿದರು. ಬಳಿಕ ರಸ್ತೆಯ ಮೂಲಕ ಮಾಗಡಿ ರಸ್ತೆ ಜಂಕ್ಷನ್‌ಗೆ ತೆರಳಿದರು.

ಮಾಗಡಿ ರಸ್ತೆ ಜಂಕ್ಷನ್‌ನಿಂದ ರೋಡ್‌ ಶೋ ಆರಂಭವಾಗುತ್ತಿದ್ದಂತೆ ಮೋದಿ ಅವರಿಗೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನಸಾಗರದಿಂದ ಹೂಮಳೆ ಸ್ವಾಗತ ದೊರಕಿತು. ಜನರತ್ತ ಕೈ ಬೀಸಿದ ಮೋದಿಗೆ ಹೂವು ಹಾಕಿ ಜೈಕಾರ ಕೂಗಿದರು. ಮೋದಿಯ ಸ್ವಾಗತಕ್ಕಾಗಿ ಸಾಂಸ್ಕೃತಿಕ ಕಲಾತಂಡಗಳನ್ನು ಆಯೋಜನೆ ಮಾಡಲಾಗಿದ್ದು, ಈಸ್‌ವೆಸ್ಟ್‌ ಜಂಕ್ಷನ್‌ ಬಳಿಕ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಪ್ರದರ್ಶನ ಮಾಡಲಾಯಿತು. ರಸ್ತೆಯುದ್ದಕ್ಕೂ ಬಿಜೆಪಿ ಬಾವುಟ, ಕೇಸರಿ ಶಾಲು ರಾರಾಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

6 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

7 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago