BREAKING NEWS

‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು.

ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ (ಮಾನನಷ್ಟ ಆಗುವ ರೀತಿಯಲ್ಲಿ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago