ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿ ಇಸ್ರೋಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿಗೆ ಪರಿಶ್ರಮಿಸಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಭೇಟಿ ಮಾಡಿದ್ದಾರೆ. ವಿಜ್ಞಾನಿಗಳನ್ನು ಭೇಟಿ ಮಾಡಲು ಆಗದೇ ಇದ್ದವರೂ ಕೂಡ ತಾವಿದ್ದಲಿಂದಲೇ ಅಭಿನಂದಿಸಿ ಸಂಭ್ರಮಿಸಿದ್ದಾರೆ. ಪ್ರಧಾನಿಯವರು ಆಗಮಿಸಿದ್ದಕ್ಕೆ ತಾವು ಹೆಚ್ಚು ಚರ್ಚೆ ಮಾಡಲು ಬಯಸುವುದಿಲ್ಲ. ಆದರೆ ಅವರಿಗೆ ಪ್ರಚಾರಕ್ಕಾಗಿ ಉಳಿದಿರುವುದು ಇಂತದ್ದೇ ಮಾರ್ಗಗಳು ಎಂದರು.
ಪ್ರಧಾನಿಯವರು ಇಸ್ರೋಗೆ ಬರಬಾರದು ಎಂದು ನಾವು ಹೇಳುವುದಿಲ್ಲ. ಆದರೆ ಮಣಿಪುರಕ್ಕೂ ಕಡ್ಡಾಯವಾಗಿ ಹೋಗಲೇಬೇಕಿತ್ತು. ಅಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗಿ ಸಾವಿರಾರು ಜನ ಸಂಕಷ್ಟದಲ್ಲಿದ್ದಾರೆ, ಹತ್ಯೆಗಳಾಗಿವೆ. ಒಮ್ಮೆ ಇಲ್ಲಿಗೆ ಬನ್ನಿ ಎಂದು ಅಲ್ಲಿನ ಜನ ಮೊರೆಯಿಟ್ಟಿದ್ದಾರೆ. ಪ್ರಧಾನಿಯವರು ತಂದೆಯ ಸ್ಥಾನದಲ್ಲಿದ್ದು, ಅಲ್ಲಿಗೆ ಭೇಟಿ ನೀಡಿ ಹಿಂಸಾಚಾರವನ್ನು ತಹಬದಿಗೆ ತರಬೇಕಿತ್ತು ಎಂದು ಹೇಳಿದರು.
ಇಲ್ಲಿ ಒಂದು ರಾಕೆಟ್ ಹಾರಿಸಿದಾಕ್ಷಣ ಬರುವಂತಹ ಮೋದಿ ಮಣಿಪುರಕ್ಕೆ ಹೋಗಬೇಕಿತ್ತು. ಈ ಎರಡೂ ಘಟನೆಗಳ ಹೋಲಿಕೆ ನೋಡಿದಾಗ ಮೋದಿಯವರ ಟೀಕೆಗಳು ಸರಿಯೆನಿಸುತ್ತವೆ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದರು.
ಶಿಕ್ಷಣದ ವ್ಯವಸ್ಥೆಯನ್ನು ಬಿಜೆಪಿಯವರ ಕೈಗೆ ಕೊಟ್ಟರೆ ಅವರು ಮಕ್ಕಳಲ್ಲಿ ಅನಗತ್ಯವಾದ ವಿಷಯಗಳನ್ನು ತುರುಕುತ್ತಾರೆ. ಕೆಟ್ಟ ಬುದ್ಧಿ, ಕೆಟ್ಟ ನೀತಿ ಹೇಳಿಕೊಡುತ್ತಾರೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಕಾರದಲ್ಲಿದ್ದಾಗ ಏನೆಲ್ಲಾ ಮಾಡಿದ್ದಾರೆ ಎಂಬುದು ಕಣ್ಣೆದುರೇ ಇದೆ. ಭಾರತ ಸಂಸ್ಕøತಿ, ಭಾಷೆ, ಆಚರಣೆಗಳಿಂದ ವೈವಿಧ್ಯಮಯವಾದ ದೇಶ. ಆದರೆ ನಾವೆಲ್ಲಾ ಭಾರತೀಯರು.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳಲ್ಲಿ ಅನಗತ್ಯ ವಿಚಾರಗಳನ್ನು ತುಂಬುತ್ತದೆ. ಇದಕ್ಕಾಗಿ ಅದನ್ನು ನಾವು ತಿರಸ್ಕರಿಸುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲೇ ಭರವಸೆ ನೀಡಿದ್ದೆವು. ನಾನು ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷನಾಗಿದ್ದೆ. ಸರ್ಕಾರ ರಚನೆಯಾದ ಬಳಿಕ ಅದನ್ನು ಅನುಷ್ಠಾನಗೊಳಿಸುವುದು ಸಚಿವನಾಗಿರುವ ನನ್ನ ಜವಾಬ್ದಾರಿ ಎಂದರು.
ರಾಜ್ಯದಲ್ಲಿ ಎನ್ಇಪಿ ಪಿಯುಸಿಯವರೆಗೆ ಅಲ್ಪಸ್ವಲ್ಪ ಅನುಷ್ಠಾನಗೊಂಡಿದೆ. ಉನ್ನತ ಶಿಕ್ಷಣದಲ್ಲಿ ಇನ್ನೂ ಜಾರಿಯಾಗಿಲ್ಲ. ಬಿಜೆಪಿಗೆ ದಮ್ಮು, ತಾಕತ್ತು ಇದ್ದರೆ ಅವರದೇ ಪಕ್ಷ ಆಡಳಿತದಲ್ಲಿರುವ ಇತರೆ ರಾಜ್ಯಗಳಲ್ಲಿ ಈವರೆಗೂ ಎನ್ಇಪಿಯನ್ನು ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಎನ್ಇಪಿಗಿಂತಲೂ ಉತ್ತಮವಾದ ಎಸ್ಇಪಿಯನ್ನು ಜಾರಿಗೆ ತರುತ್ತೇವೆ. ರಾಜ್ಯ ಶಿಕ್ಷಣ ನೀತಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸಲು ಮುಖ್ಯಮಂತ್ರಿಯವರಿಗೆ ಅಕಾರ ನೀಡಲಾಗಿದೆ. ಉನ್ನತ ಶಿಕ್ಷಣದ ಇಲಾಖೆಯಲ್ಲಿ ವ್ಯಾಪಕ ಚರ್ಚೆ ಬಳಿಕ ಸ್ಥಳೀಯ ನೀತಿಯನ್ನು ರೂಪಿಸುವುದಾಗಿ ಹೇಳಿದರು.
ಸ್ಥಳೀಯ ಶಾಲಾಭಿವೃದ್ಧಿ ಸಮಿತಿ (ಎಸ್ಡಿಎಂಸಿ)ಗಳು ಸಮರ್ಪಕವಾಗಿ ಕೆಲಸ ಮಾಡದೇ ಇರುವ ಬಗ್ಗೆ ಚರ್ಚೆಗಳು ಬಂದಿವೆ. ತಾವು ನಾಳೆಯಿಂದ ಹುಬ್ಬಳ್ಳಿ-ಧಾರವಾಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಸ್ಥಳೀಯವಾಗಿ ಸಮಿತಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಆಡಳಿತ ವರ್ಗಗಳ ಸಮಸ್ಯೆಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ. ಅದನ್ನು ಮೀರಿಯೂ ರಾಜಕಾರಣಕ್ಕಾಗಿ ಎಸ್ಡಿಎಂಸಿಗಳಲ್ಲಿ ಸಮಸ್ಯೆಗಳು ಉದ್ಭವಿಸಿದರೆ ಅಗತ್ಯ ಕಾನೂನಿನ ಮೂಲಕ ಸರಿಪಡಿಸುವುದಾಗಿ ಹೇಳಿದರು.
ತಮ್ಮ ಸರ್ಕಾರ ಯಾವುದೇ ಸರ್ಕಾರಿ ಕಾಲೇಜು ಮತ್ತು ಶಾಲೆಗಳನ್ನು ಮುಚ್ಚಲು ಬಯಸುವುದಿಲ್ಲ. ಮಕ್ಕಳಿಗೆ ಕನ್ನಡ ಭಾಷೆ ಕಲಿಕೆಗೆ ಆದ್ಯತೆ ನೀಡಲಾಗುವುದು. ಆದರೆ ಭಾಷಾ ಮಾಧ್ಯಮ ಆಯ್ಕೆಗೆ ಪೋಷಕರು ಹಾಗೂ ಮಕ್ಕಳಿಗೆ ಸ್ವಾತಂತ್ರ್ಯ ಇದೆ ಎಂದು ತಿಳಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…