BREAKING NEWS

ಮುಂಗಾರು ಅಧಿವೇಶನ: ಆಗಸ್ಟ್ 7ಕ್ಕೆ ರಾಜ್ಯಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು.

ರಾಜಸ್ಥಾನ ಮತ್ತು ಮಣಿಪುರ ಹಿಂಸಾಚಾರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ ಸದನವನ್ನು ಮುಂದಿನ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಷಯವನ್ನು ಚರ್ಚಿಸಲು ಬಯಸಿದವು. ಆದರೆ, ವಿರೋಧ ಪಕ್ಷಗಳು ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಚರ್ಚಿಸಲು ಒತ್ತಾಯಿಸಿದವು. ಈ ವೇಳೆ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು.

ಇದಕ್ಕೂ ಮುನ್ನ ಇಂದು ರಾಜ್ಯಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು.

ರಾಜ್ಯಸಭೆಯಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಅವರು, ರಾಜಸ್ಥಾನದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ವಿಚಾರದ ಕುರಿತು ಚರ್ಚೆಯಾಗಲಿ ಎಂದು ಒತ್ತಾಯಿಸಿದರು. ಈ ವೇಳೆ, ವಿರೋಧ ಪಕ್ಷಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ಸಭಾಪತಿ ಜಗದೀಪ್ ಧಂಖರ್ ಅವರು ವಿರೋಧ ಪಕ್ಷದ ನಾಯಕರು ಮಾತನಾಡಲು ಅವಕಾಶ ನೀಡಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದ ಬಗ್ಗೆ ಘೋಷಣೆಗಳನ್ನು ಕೂಗಿದರು.

ಸಭಾಪತಿ ಜಗದೀಪ್ ಧಂಖರ್ ಅವರು, ನೀವು ವಿರೋಧ ಪಕ್ಷಗಳ ಸದಸ್ಯರು ಮಾತನಾಡುವುದನ್ನು ತೀವ್ರ ಗಮನದಿಂದ ಕೇಳಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಖಜಾನೆ ಪೀಠಗಳತ್ತ (ಆಡಳಿತ ಪಕ್ಷದ ಸದಸ್ಯರು) ಕೈ ತೋರಿಸಿ, ರಾಜಸ್ಥಾನಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿ. ‘ಅವರಿಗೆ ಶಕ್ತಿ ಇದ್ದರೆ, ಅಲ್ಲಿ (ರಾಜ್ಯ ವಿಧಾನಸಭೆ) ಸಮಸ್ಯೆಯನ್ನು ಪ್ರಸ್ತಾಪಿಸಿ’ ಎಂದು ಹೇಳಿದರು.

ಆಡಳಿತ ಮತ್ತು ವಿರೋಧ ಪಕ್ಷಗಳ ಸದದ್ಯರ ಘೋಷಣೆಗಳ ಮಧ್ಯೆ ಮಣಿಪುರದ ಪರಿಸ್ಥಿತಿಯ ಬಗ್ಗೆ 267ನೇ ನಿಯಮದ ಅಡಿಯಲ್ಲಿ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯನ್ನು ಪ್ರಸ್ತಾಪಿಸಲು ಖರ್ಗೆ ಪ್ರಯತ್ನಿಸಿದರು.

ನ್ಯಾಯಾಂಗಕ್ಕೆ ಸಂಬಂಧಿಸಿದ ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಸದನವು ಯಾವ ವಿಚಾರದ ಕುರಿತು ಬೇಕಿದ್ದರೂ ಚರ್ಚಿಸಬಹುದು ಎಂದು ತಾವು ಈಗಾಗಲೇ ಹೇಳಿರುವುದಾಗಿ ಸಭಾಪತಿ ತಿಳಿಸಿದರು.

ಮಣಿಪುರದ ಕುರಿತು ಚರ್ಚೆಗೆ ಅವಕಾಶ ನೀಡಲಾಗಿತ್ತು ಮತ್ತು ರಾಜಸ್ಥಾನ ಹಾಗೂ ಛತ್ತೀಸ್‌ಗಢಕ್ಕೆ ಸಂಬಂಧಿಸಿದ ವಿಷಯಗಳನ್ನು ಸಹ ಚರ್ಚಿಸಬಹುದು ಎಂದು ಧಂಖರ್ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago