BREAKING NEWS

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ : ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು : ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುತ್ತುಮನೆಯ ನಿಶಾಂತ್ ಕುಮಾರ್ (19) ಮತ್ತು ಆರ್ಯಾಪು ಗ್ರಾಮದ ಪ್ರಜ್ವಲ್ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮರೇಲ್ ಕಾಡುಮನೆ ನಿವಾಸಿ ಮೊಹಮ್ಮದ್ ಫರೀಷ್ (18) ತನ್ನ ಸಹಪಾಠಿ ಹಿಂದೂ ಯುವತಿಯೊಂದಿಗೆ ಅಂಗಡಿಯೊಂದರಲ್ಲಿ ಜ್ಯೂಸ್ ಕುಡಿಯುತ್ತಿದ್ದಾಗ ಜನರ ಗುಂಪೊಂದು ದಾಳಿ ಮಾಡಿದೆ.ಭೀಕರ ಹಲ್ಲೆಯಿಂದ ಫರೀಷ್ ಅವರ ದೇಹದ ಮೇಲೆ ಆಳವಾದ ಗಾಯಗಳಾಗಿವೆ. ಫರೀಷ್ ಮತ್ತು ಹಿಂದೂ ಯುವತಿ ಪುತ್ತೂರಿನ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಸದ್ಯ ಫರೀಷ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

lokesh

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago