BREAKING NEWS

ಭಾರತದಿಂದ ಮತ್ತಷ್ಟು ಮಾನವೀಯ ನೆರವು : ಪ್ರಧಾನಿ ಮೋದಿಗೆ ಉಕ್ರೇನ್ ಅಧ್ಯಕ್ಷ ಪತ್ರ

ಹೊಸದಿಲ್ಲಿ : ರಷ್ಯಾ – ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್‌ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಈ ಇಬ್ಬರು ನಾಯಕಿಯರು ಅಭಿಪ್ರಾಯಗಳನ್ನು ಹಂಚಿಕೊಂಡರು. ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವ ಭರವಸೆಯನ್ನು ಕೊಡಲಾಗಿದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದರೆ, ಈ ಭೇಟಿ ಫಲಪ್ರದವಾಗಿದೆ ಎಂದು ಜಪರೊವಾ ಹೇಳಿದ್ದಾರೆ.

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago