ಹೊಸದಿಲ್ಲಿ : ರಷ್ಯಾ – ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಉಕ್ರೇನ್ ಉಪ ವಿದೇಶಾಂಗ ಸಚಿವೆ ಎಮಿನೆ ಜಪರೊವಾ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಈ ಇಬ್ಬರು ನಾಯಕಿಯರು ಅಭಿಪ್ರಾಯಗಳನ್ನು ಹಂಚಿಕೊಂಡರು. ಉಕ್ರೇನ್ಗೆ ಹೆಚ್ಚುವರಿ ಮಾನವೀಯ ನೆರವು ನೀಡುವ ಭರವಸೆಯನ್ನು ಕೊಡಲಾಗಿದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದರೆ, ಈ ಭೇಟಿ ಫಲಪ್ರದವಾಗಿದೆ ಎಂದು ಜಪರೊವಾ ಹೇಳಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…