ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.
ಮುಂಬೈನಲ್ಲಿ ಯಶ್ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್ರಾಜ್ ಭಾರತಿ ಸಮ್ಮಾನ್’ (ವೈಬಿಎಸ್) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನಾನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.
‘ನಾಗರಿಕರ ಜೀವನವನ್ನು ಸುಲಭಗೊಳಿಸುವುದೇ ಉತ್ತಮ ಆಡಳಿತದ ಗುರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.
ಯಶ್ರಾಜ್ ಭಾರತಿ ಸಮ್ಮಾನ್ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿರುವ ಯಶ್ರಾಜ್ ಸಂಶೋಧನಾ ಫೌಂಡೇಷನ್ನ ಕಾರ್ಯವನ್ನು ಸಚಿವರು ಶ್ಲಾಘಿಸಿದರು.
‘ಆರೋಗ್ಯ ಕ್ಷೇತ್ರದಲ್ಲಿನ ನಾವೀನ್ಯತೆ, ಜನರ ಜೀವನ ಪರಿವರ್ತನೆ ಮತ್ತು ನೈತಿಕ ಆಡಳಿತ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…