BREAKING NEWS

ಬಳಕೆಯಲ್ಲಿಲ್ಲದ 2 ಸಾವಿರಕ್ಕೂ ಹೆಚ್ಚಿನ ಕಾನೂನು ರದ್ದು: ಸಚಿವ ಜಿತೇಂದ್ರ ಸಿಂಗ್

ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.

ಮುಂಬೈನಲ್ಲಿ ಯಶ್‌ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್‌ರಾಜ್ ಭಾರತಿ ಸಮ್ಮಾನ್’ (ವೈಬಿಎಸ್‌) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನಾನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ನಾಗರಿಕರ ಜೀವನವನ್ನು ಸುಲಭಗೊಳಿಸುವುದೇ ಉತ್ತಮ ಆಡಳಿತದ ಗುರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.

ಯಶ್‌ರಾಜ್ ಭಾರತಿ ಸಮ್ಮಾನ್ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿರುವ ಯಶ್‌ರಾಜ್ ಸಂಶೋಧನಾ ಫೌಂಡೇಷನ್‌ನ ಕಾರ್ಯವನ್ನು ಸಚಿವರು ಶ್ಲಾಘಿಸಿದರು.

‘ಆರೋಗ್ಯ ಕ್ಷೇತ್ರದಲ್ಲಿನ ನಾವೀನ್ಯತೆ, ಜನರ ಜೀವನ ಪರಿವರ್ತನೆ ಮತ್ತು ನೈತಿಕ ಆಡಳಿತ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

andolanait

Recent Posts

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

14 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

19 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago