ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.
ಮುಂಬೈನಲ್ಲಿ ಯಶ್ರಾಜ್ ಸಂಶೋಧನಾ ಫೌಂಡೇಷನ್ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ‘ಯಶ್ರಾಜ್ ಭಾರತಿ ಸಮ್ಮಾನ್’ (ವೈಬಿಎಸ್) ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಯಥಾಸ್ಥಿತಿಯ ವಿಧಾನಗಳಿಗಿಂತ ಭಿನ್ನವಾಗಿ ಪ್ರಧಾನಿ ಮೋದಿ ಅವರು ನಡೆದುಕೊಂಡಿದ್ದಾರೆ. ಬ್ರಿಟಿಷರ ಕಾಲದಿಂದಲೂ ಉಳಿದುಕೊಂಡು ಬಂದಿದ್ದ ಹಾಗೂ ನಾಗರಿಕರಿಗೆ ಅನಾನುಕೂಲತೆಯನ್ನುಂಟು ಮಾಡುವ ಕೆಲವು ಕಾನೂನು ಮತ್ತು ನೀತಿಗಳನ್ನು ತೆಗೆದುಹಾಕಲು ಅವರು ಧೈರ್ಯವನ್ನು ಪ್ರದರ್ಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.
‘ನಾಗರಿಕರ ಜೀವನವನ್ನು ಸುಲಭಗೊಳಿಸುವುದೇ ಉತ್ತಮ ಆಡಳಿತದ ಗುರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.
ಯಶ್ರಾಜ್ ಭಾರತಿ ಸಮ್ಮಾನ್ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿರುವ ಯಶ್ರಾಜ್ ಸಂಶೋಧನಾ ಫೌಂಡೇಷನ್ನ ಕಾರ್ಯವನ್ನು ಸಚಿವರು ಶ್ಲಾಘಿಸಿದರು.
‘ಆರೋಗ್ಯ ಕ್ಷೇತ್ರದಲ್ಲಿನ ನಾವೀನ್ಯತೆ, ಜನರ ಜೀವನ ಪರಿವರ್ತನೆ ಮತ್ತು ನೈತಿಕ ಆಡಳಿತ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…