BREAKING NEWS

ಅಮರನಾಥ್‌ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳಿಗೆ ನಿಷೇಧ

ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ಗುರುವಾರ ಹೊರಡಿಸಿರುವ ಆರೋಗ್ಯ ಸಲಹೆಯಲ್ಲಿ ತಿಳಿಸಿದೆ. ನಿಷೇಧಿತ ಆಹಾರ ಪದಾರ್ಥಗಳಲ್ಲಿ ಪಾನೀಯಗಳು, ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳು ಸೇರಿವೆ.

ದಕ್ಷಿಣ ಕಾಶ್ಮೀರದಲ್ಲಿರುವ ಹಿಮಾಲಯನ್ ದೇಗುಲಕ್ಕೆ ತೀರ್ಥಯಾತ್ರೆ ಕೈಗೊಳ್ಳುವ ಭಕ್ತರು ದೈಹಿಕ ಕ್ಷಮತೆಯನ್ನು ಸಾಧಿಸಲು ಆರೋಗ್ಯ ಸಲಹೆ ನೀಡಿದ್ದು ದಿನಕ್ಕೆ ಸುಮಾರು 4 ರಿಂದ 5 ಕಿಮೀ ಪೂರ್ವಭಾವಿಯಾಗಿ ಬೆಳಗ್ಗೆ ಮತ್ತು ಸಂಜೆಯ ನಡಿಗೆಯನ್ನು ಪ್ರಾರಂಭಿಸುವಂತೆ ಕೇಳಿಕೊಂಡಿದೆ.

ದಕ್ಷಿಣ ಕಾಶ್ಮೀರ ಹಿಮಾಲಯದ 3,880-ಮೀಟರ್ ಎತ್ತರದ ಪವಿತ್ರ ಗುಹೆಗೆ ಯಾತ್ರೆ ಜುಲೈ 1 ರಂದು ಎರಡು ಮಾರ್ಗಗಳ ಮೂಲಕ ಪ್ರಾರಂಭವಾಗಲಿದೆ. ಅನಂತನಾಗ್ ಜಿಲ್ಲೆಯ ಸಾಂಪ್ರದಾಯಿಕ 48-ಕಿಮೀ ನುನ್ವಾನ್-ಪಹಲ್ಗಾಮ್ ಮಾರ್ಗ ಮತ್ತು ಗಂದರ್ಬಾಲ್ ನ ಬಾಲ್ ತಾಲ್ 14 ಕಿಮೀ ಕಡಿದಾದ ಇನ್ನೊಂದು ಮಾರ್ಗವಾಗಿದೆ.

ನೀವು 14 ಕಿಲೋಮೀಟರ್ ಪಾದಯಾತ್ರೆಯ ಅಮರನಾಥ ಯಾತ್ರೆಯನ್ನು ಪ್ರಾರಂಭಿಸುವ ಮೊದಲು, ನಿಷೇಧಿತ ಆಹಾರ ಪದಾರ್ಥಗಳ ಪಟ್ಟಿ ಮತ್ತು ತೀರ್ಥಯಾತ್ರೆಯಲ್ಲಿ ನಿಮಗೆ ಸಾಗಿಸಲು ಅನುಮತಿಸಲಾದ ವಸ್ತುಗಳನ್ನು ಪರಿಶೀಲಿಸಿ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಸಲಹೆಯ ಪ್ರಕಾರ, ನಿಷೇಧಿತ ಆಹಾರಗಳಲ್ಲಿ ಭಾರೀ ಪುಲಾವ್, ಫ್ರೈಡ್ ರೈಸ್, ಪೂರಿ, ಬಾಟುರಾ, ಪಿಜ್ಜಾ, ಬರ್ಗರ್, ಸ್ಟಫ್ಡ್ ಪರೋಟಾ, ದೋಸೆ ಮತ್ತು ಕರಿದ ರೊಟ್ಟಿ, ಬೆಣ್ಣೆಯೊಂದಿಗೆ ಬ್ರೆಡ್, ಕ್ರೀಮ್ ಆಧಾರಿತ ಆಹಾರಗಳು, ಉಪ್ಪಿನಕಾಯಿ, ಚಟ್ನಿ, ಕರಿದ ಪಾಪಡ್, ಚೌಮೇನ್ ಇತರ ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳನ್ನು ತರಬಾರದು ಎಂದು ಸೂಚಿಸಿದೆ.

ಭಕ್ತರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಧಾನ್ಯಗಳು, ಬೇಳೆಕಾಳುಗಳು, ಹಸಿರು ತರಕಾರಿಗಳು ಮತ್ತು ಸಲಾಡ್‌ಗಳಂತಹ ಆರೋಗ್ಯಕರ ಆಯ್ಕೆಗಳನ್ನು ಕೆಲವು ಅಕ್ಕಿ ಭಕ್ಷ್ಯಗಳೊಂದಿಗೆ ಶಿಫಾರಸು ಮಾಡಿದೆ. 40 ನಿಷೇಧಿತ ವಸ್ತುಗಳನ್ನು ಹೊರತುಪಡಿಸಿ ಎಲ್ಲವನ್ನೂ ಅನುಮತಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

andolanait

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

3 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

3 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

3 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

4 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

4 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

5 hours ago