ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ಗುರುವಾರ ಹೊರಡಿಸಿರುವ ಆರೋಗ್ಯ ಸಲಹೆಯಲ್ಲಿ ತಿಳಿಸಿದೆ. ನಿಷೇಧಿತ ಆಹಾರ ಪದಾರ್ಥಗಳಲ್ಲಿ ಪಾನೀಯಗಳು, ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳು ಸೇರಿವೆ.
ದಕ್ಷಿಣ ಕಾಶ್ಮೀರದಲ್ಲಿರುವ ಹಿಮಾಲಯನ್ ದೇಗುಲಕ್ಕೆ ತೀರ್ಥಯಾತ್ರೆ ಕೈಗೊಳ್ಳುವ ಭಕ್ತರು ದೈಹಿಕ ಕ್ಷಮತೆಯನ್ನು ಸಾಧಿಸಲು ಆರೋಗ್ಯ ಸಲಹೆ ನೀಡಿದ್ದು ದಿನಕ್ಕೆ ಸುಮಾರು 4 ರಿಂದ 5 ಕಿಮೀ ಪೂರ್ವಭಾವಿಯಾಗಿ ಬೆಳಗ್ಗೆ ಮತ್ತು ಸಂಜೆಯ ನಡಿಗೆಯನ್ನು ಪ್ರಾರಂಭಿಸುವಂತೆ ಕೇಳಿಕೊಂಡಿದೆ.
ದಕ್ಷಿಣ ಕಾಶ್ಮೀರ ಹಿಮಾಲಯದ 3,880-ಮೀಟರ್ ಎತ್ತರದ ಪವಿತ್ರ ಗುಹೆಗೆ ಯಾತ್ರೆ ಜುಲೈ 1 ರಂದು ಎರಡು ಮಾರ್ಗಗಳ ಮೂಲಕ ಪ್ರಾರಂಭವಾಗಲಿದೆ. ಅನಂತನಾಗ್ ಜಿಲ್ಲೆಯ ಸಾಂಪ್ರದಾಯಿಕ 48-ಕಿಮೀ ನುನ್ವಾನ್-ಪಹಲ್ಗಾಮ್ ಮಾರ್ಗ ಮತ್ತು ಗಂದರ್ಬಾಲ್ ನ ಬಾಲ್ ತಾಲ್ 14 ಕಿಮೀ ಕಡಿದಾದ ಇನ್ನೊಂದು ಮಾರ್ಗವಾಗಿದೆ.
ನೀವು 14 ಕಿಲೋಮೀಟರ್ ಪಾದಯಾತ್ರೆಯ ಅಮರನಾಥ ಯಾತ್ರೆಯನ್ನು ಪ್ರಾರಂಭಿಸುವ ಮೊದಲು, ನಿಷೇಧಿತ ಆಹಾರ ಪದಾರ್ಥಗಳ ಪಟ್ಟಿ ಮತ್ತು ತೀರ್ಥಯಾತ್ರೆಯಲ್ಲಿ ನಿಮಗೆ ಸಾಗಿಸಲು ಅನುಮತಿಸಲಾದ ವಸ್ತುಗಳನ್ನು ಪರಿಶೀಲಿಸಿ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್ಎಎಸ್ಬಿ) ಸಲಹೆಯ ಪ್ರಕಾರ, ನಿಷೇಧಿತ ಆಹಾರಗಳಲ್ಲಿ ಭಾರೀ ಪುಲಾವ್, ಫ್ರೈಡ್ ರೈಸ್, ಪೂರಿ, ಬಾಟುರಾ, ಪಿಜ್ಜಾ, ಬರ್ಗರ್, ಸ್ಟಫ್ಡ್ ಪರೋಟಾ, ದೋಸೆ ಮತ್ತು ಕರಿದ ರೊಟ್ಟಿ, ಬೆಣ್ಣೆಯೊಂದಿಗೆ ಬ್ರೆಡ್, ಕ್ರೀಮ್ ಆಧಾರಿತ ಆಹಾರಗಳು, ಉಪ್ಪಿನಕಾಯಿ, ಚಟ್ನಿ, ಕರಿದ ಪಾಪಡ್, ಚೌಮೇನ್ ಇತರ ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳನ್ನು ತರಬಾರದು ಎಂದು ಸೂಚಿಸಿದೆ.
ಭಕ್ತರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಧಾನ್ಯಗಳು, ಬೇಳೆಕಾಳುಗಳು, ಹಸಿರು ತರಕಾರಿಗಳು ಮತ್ತು ಸಲಾಡ್ಗಳಂತಹ ಆರೋಗ್ಯಕರ ಆಯ್ಕೆಗಳನ್ನು ಕೆಲವು ಅಕ್ಕಿ ಭಕ್ಷ್ಯಗಳೊಂದಿಗೆ ಶಿಫಾರಸು ಮಾಡಿದೆ. 40 ನಿಷೇಧಿತ ವಸ್ತುಗಳನ್ನು ಹೊರತುಪಡಿಸಿ ಎಲ್ಲವನ್ನೂ ಅನುಮತಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…