BREAKING NEWS

ಅಮರನಾಥ್‌ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳಿಗೆ ನಿಷೇಧ

ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ಗುರುವಾರ ಹೊರಡಿಸಿರುವ ಆರೋಗ್ಯ ಸಲಹೆಯಲ್ಲಿ ತಿಳಿಸಿದೆ. ನಿಷೇಧಿತ ಆಹಾರ ಪದಾರ್ಥಗಳಲ್ಲಿ ಪಾನೀಯಗಳು, ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳು ಸೇರಿವೆ.

ದಕ್ಷಿಣ ಕಾಶ್ಮೀರದಲ್ಲಿರುವ ಹಿಮಾಲಯನ್ ದೇಗುಲಕ್ಕೆ ತೀರ್ಥಯಾತ್ರೆ ಕೈಗೊಳ್ಳುವ ಭಕ್ತರು ದೈಹಿಕ ಕ್ಷಮತೆಯನ್ನು ಸಾಧಿಸಲು ಆರೋಗ್ಯ ಸಲಹೆ ನೀಡಿದ್ದು ದಿನಕ್ಕೆ ಸುಮಾರು 4 ರಿಂದ 5 ಕಿಮೀ ಪೂರ್ವಭಾವಿಯಾಗಿ ಬೆಳಗ್ಗೆ ಮತ್ತು ಸಂಜೆಯ ನಡಿಗೆಯನ್ನು ಪ್ರಾರಂಭಿಸುವಂತೆ ಕೇಳಿಕೊಂಡಿದೆ.

ದಕ್ಷಿಣ ಕಾಶ್ಮೀರ ಹಿಮಾಲಯದ 3,880-ಮೀಟರ್ ಎತ್ತರದ ಪವಿತ್ರ ಗುಹೆಗೆ ಯಾತ್ರೆ ಜುಲೈ 1 ರಂದು ಎರಡು ಮಾರ್ಗಗಳ ಮೂಲಕ ಪ್ರಾರಂಭವಾಗಲಿದೆ. ಅನಂತನಾಗ್ ಜಿಲ್ಲೆಯ ಸಾಂಪ್ರದಾಯಿಕ 48-ಕಿಮೀ ನುನ್ವಾನ್-ಪಹಲ್ಗಾಮ್ ಮಾರ್ಗ ಮತ್ತು ಗಂದರ್ಬಾಲ್ ನ ಬಾಲ್ ತಾಲ್ 14 ಕಿಮೀ ಕಡಿದಾದ ಇನ್ನೊಂದು ಮಾರ್ಗವಾಗಿದೆ.

ನೀವು 14 ಕಿಲೋಮೀಟರ್ ಪಾದಯಾತ್ರೆಯ ಅಮರನಾಥ ಯಾತ್ರೆಯನ್ನು ಪ್ರಾರಂಭಿಸುವ ಮೊದಲು, ನಿಷೇಧಿತ ಆಹಾರ ಪದಾರ್ಥಗಳ ಪಟ್ಟಿ ಮತ್ತು ತೀರ್ಥಯಾತ್ರೆಯಲ್ಲಿ ನಿಮಗೆ ಸಾಗಿಸಲು ಅನುಮತಿಸಲಾದ ವಸ್ತುಗಳನ್ನು ಪರಿಶೀಲಿಸಿ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಸಲಹೆಯ ಪ್ರಕಾರ, ನಿಷೇಧಿತ ಆಹಾರಗಳಲ್ಲಿ ಭಾರೀ ಪುಲಾವ್, ಫ್ರೈಡ್ ರೈಸ್, ಪೂರಿ, ಬಾಟುರಾ, ಪಿಜ್ಜಾ, ಬರ್ಗರ್, ಸ್ಟಫ್ಡ್ ಪರೋಟಾ, ದೋಸೆ ಮತ್ತು ಕರಿದ ರೊಟ್ಟಿ, ಬೆಣ್ಣೆಯೊಂದಿಗೆ ಬ್ರೆಡ್, ಕ್ರೀಮ್ ಆಧಾರಿತ ಆಹಾರಗಳು, ಉಪ್ಪಿನಕಾಯಿ, ಚಟ್ನಿ, ಕರಿದ ಪಾಪಡ್, ಚೌಮೇನ್ ಇತರ ಕರಿದ ಮತ್ತು ತ್ವರಿತ ಆಹಾರ ಪದಾರ್ಥಗಳನ್ನು ತರಬಾರದು ಎಂದು ಸೂಚಿಸಿದೆ.

ಭಕ್ತರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಧಾನ್ಯಗಳು, ಬೇಳೆಕಾಳುಗಳು, ಹಸಿರು ತರಕಾರಿಗಳು ಮತ್ತು ಸಲಾಡ್‌ಗಳಂತಹ ಆರೋಗ್ಯಕರ ಆಯ್ಕೆಗಳನ್ನು ಕೆಲವು ಅಕ್ಕಿ ಭಕ್ಷ್ಯಗಳೊಂದಿಗೆ ಶಿಫಾರಸು ಮಾಡಿದೆ. 40 ನಿಷೇಧಿತ ವಸ್ತುಗಳನ್ನು ಹೊರತುಪಡಿಸಿ ಎಲ್ಲವನ್ನೂ ಅನುಮತಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago