ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇದುವರೆಗೂ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಅನೇಕ ಕಡೆ ಬಸ್ಗಳ ಚಾಲಕರಿಲ್ಲ ಎನ್ನುವ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸದಾಗಿ 13 ಸಾವಿರ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
ಇದರ ಜತೆಗೆ 4 ಸಾವಿರ ಹೊಸ ಬಸ್ಗಳನ್ನು ಖರೀದಿ ಮಾಡುವುದಾಗಿ ಅವರು ಹೇಳಿದರು.
ರಾಜ್ಯಪಾಲರ ಭಾಷಣದ ಮೇಲೆ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಕೋವಿಡ್ ಸಮಯದಲ್ಲಿ ರಾಜ್ಯಾದ್ಯಂತ ಸ್ಥಗಿತಗೊಂಡಿದ್ದ ಎಲ್ಲ ಬಸ್ ಮಾರ್ಗಗಳನ್ನು ಮತ್ತೆ ಆರಂಭಿಸಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.
ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇವಸ್ಥಾನ, ಯಾತ್ರಾ ಸ್ಥಳ ಸೇರಿದಂತೆ ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಸ್ಗಳ ಕೊರತೆಯೂ ಎದುರಾಗಿದೆ. ಹೀಗಾಗಿ ಚಾಲಕ, ನಿರ್ವಾಹಕ, ತಂತ್ರಜ್ಞರ ನೇಮಕ ಹಾಗೂ ಹೊಸ ಬಸ್ಗಳ ಖರೀದಿಗೆ ನಿರ್ಧರಿಸಿರುವುದಾಗಿ ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ 5 ಗ್ಯಾರಂಟಿಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನವೇ ಯೋಜನೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…