ರಬತ್ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ.
ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಸ್ಪೇನ್, ಯುನೈಟೆಡ್ ಕಿಂಗ್ಡಮ್ ಮತ್ತು ಕತಾರ್ನ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಭೂಕಂಪಕ್ಕೆ ಸಿಲುಕಿ 2,562 ಜನರು ಗಾಯಗೊಂಡಿದ್ದಾರೆ. ಮರ್ರಾಕೇಶ್ನಿಂದ 60 ಕಿ.ಮೀ. ದೂರದಲ್ಲಿರುವ ತಾಫೆಘಗ್ಟೆ ಎಂಬ ಪರ್ವತ ಹಳ್ಳಿಯಲ್ಲಿನ ಪ್ರತಿ ಕಟ್ಟಡವೂ ಭೂಕಂಪದಿಂದಾಗಿ ನಾಶವಾಗಿದೆ.
ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ನೆಲಸಮವಾಗಿ ಅಪಾರ ಸಾವು-ನೋವಾಗಿತ್ತು. ದುರಂತಕ್ಕೆ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ವಿಷಾದ ವ್ಯಕ್ತಪಡಿಸಿದ್ದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿದ್ದರು. ಮೊರಾಕ್ಕೋಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…