ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಲಿಪಾಲ್ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್ಸಿ ಮೂಲಕ ನೇಮಕವಾಗುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಯುಪಿಎಸ್ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ‘ ಎಂದು ಹೇಳಿದ್ದಾರೆ.
‘ಯುಪಿಎಸ್ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿತ್ತು. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.
ಒಬ್ಬ ಕೋಳಿ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಗಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…