BREAKING NEWS

UPSC ಮೂಲಕ ನೇಮಕವಾಗುವ ಬಹುತೇಕ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವ

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಲಿಪಾಲ್‌ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್‌ಸಿ ಮೂಲಕ ನೇಮಕವಾಗುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಯುಪಿಎಸ್‌ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ‘ ಎಂದು ಹೇಳಿದ್ದಾರೆ.

‘ಯುಪಿಎಸ್‌ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿತ್ತು. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಕೋಳಿ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಗಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್‌ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.

andolanait

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

44 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

8 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

8 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago