BREAKING NEWS

UPSC ಮೂಲಕ ನೇಮಕವಾಗುವ ಬಹುತೇಕ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವ

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಲಿಪಾಲ್‌ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್‌ಸಿ ಮೂಲಕ ನೇಮಕವಾಗುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಯುಪಿಎಸ್‌ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ‘ ಎಂದು ಹೇಳಿದ್ದಾರೆ.

‘ಯುಪಿಎಸ್‌ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿತ್ತು. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಕೋಳಿ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಗಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್‌ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 hours ago