BREAKING NEWS

UPSC ಮೂಲಕ ನೇಮಕವಾಗುವ ಬಹುತೇಕ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವ

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ.

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಲಿಪಾಲ್‌ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಸಚಿವರು ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್‌ಸಿ ಮೂಲಕ ನೇಮಕವಾಗುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಯುಪಿಎಸ್‌ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ‘ ಎಂದು ಹೇಳಿದ್ದಾರೆ.

‘ಯುಪಿಎಸ್‌ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿತ್ತು. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಕೋಳಿ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಗಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್‌ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.

andolanait

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago