BREAKING NEWS

ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಬಸ್ ನಡಿಗೆ ಬಿದ್ದು ತಾಯಿ ಆತ್ಮಹತ್ಯೆ

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ ನ ಮುಂದೆ ಜಿಗಿದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ.

ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45.000 ರೂ.ಲಭಿಸುವುದಾಗಿ ಹೇಳಿ ಯಾರೋ ದಾರಿ ತಪ್ಪಿಸಿದ್ದರಿಂದ ಮಹಿಳೆ ಈ ರೀತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಮಹಿಳೆ ಈ ರೀತಿ ಬಸ್ಸಿನಡಿ ಸಿಲುಕಿ ತನ್ನ ಜೀವನವನ್ನು ಕೊನೆಗೊಳಿಸಿದ್ದಾರೆ.

ವೀಡಿಯೊವನ್ನು ಟ್ವೀಟ್ ಮಾಡಿದ ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಜೀವನ ಸಾಗಿಸಲು ಪ್ರಯತ್ನಿಸುವವರು ಎದುರಿಸುತ್ತಿರುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ. ನಿಜವಾದ ಅಭಿವೃದ್ಧಿ ಎಂದರೆ ಯಾರೂ ಅಂತಹ ಹೆಜ್ಜೆ ಇಡಬಾರದು ಎಂದು ಟ್ವೀಟ್ ಮಾಡಲಾಗಿದೆ.

ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು ಈ ವೇಳೆ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿ ಈ ನಿರ್ಧಾರಕ್ಕೆ ಬಂದಿರುವುದು ತಿಳಿದುಬಂದಿದೆ.

lokesh

Recent Posts

ಹೀಗೊಂದು ಬೆಕ್ಕಾಯಣ

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…

27 seconds ago

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

6 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

10 mins ago

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

21 mins ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago