BREAKING NEWS

ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಬಸ್ ನಡಿಗೆ ಬಿದ್ದು ತಾಯಿ ಆತ್ಮಹತ್ಯೆ

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ ನ ಮುಂದೆ ಜಿಗಿದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ.

ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45.000 ರೂ.ಲಭಿಸುವುದಾಗಿ ಹೇಳಿ ಯಾರೋ ದಾರಿ ತಪ್ಪಿಸಿದ್ದರಿಂದ ಮಹಿಳೆ ಈ ರೀತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಮಹಿಳೆ ಈ ರೀತಿ ಬಸ್ಸಿನಡಿ ಸಿಲುಕಿ ತನ್ನ ಜೀವನವನ್ನು ಕೊನೆಗೊಳಿಸಿದ್ದಾರೆ.

ವೀಡಿಯೊವನ್ನು ಟ್ವೀಟ್ ಮಾಡಿದ ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಜೀವನ ಸಾಗಿಸಲು ಪ್ರಯತ್ನಿಸುವವರು ಎದುರಿಸುತ್ತಿರುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ. ನಿಜವಾದ ಅಭಿವೃದ್ಧಿ ಎಂದರೆ ಯಾರೂ ಅಂತಹ ಹೆಜ್ಜೆ ಇಡಬಾರದು ಎಂದು ಟ್ವೀಟ್ ಮಾಡಲಾಗಿದೆ.

ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು ಈ ವೇಳೆ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿ ಈ ನಿರ್ಧಾರಕ್ಕೆ ಬಂದಿರುವುದು ತಿಳಿದುಬಂದಿದೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago