ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್ ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್ ಫ್ರೆಶನರ್ ಮಾತ್ರವಲ್ಲದೇ ಸುಗಂಧ ದೃವ್ಯ ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ.
ಶ್ರೀರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಅವರ ಸಲಹೆ ಪಡೆದು ಈ ಉತ್ಪನ್ನಗಳನ್ನು ತಯಾರಿಸಿರುವುದಾಗಿ ಸಂಸ್ಥೆಯು ಹೇಳಿಕೊಂಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೇಡ್ಲ ಆರ್ಗಾನಿಕ್ಸ್ ಸಂಸ್ಥೆಯ ಮುಖ್ಯಸ್ಥರಾದ ರಾಜಾರಾಮ್ ಅವರು, ಗೋಮೂತ್ರ ಬಳಕೆಗೆ ತುಂಬಾ ಕಷ್ಟ. ಅದನ್ನು ಹೇಗೆ ಕುಡಿಯುವುದು , ಹೇಗೆ ಬಳಸುವುದು ಎಂದು ಜನರಲ್ಲಿ ತಾತ್ಸಾರವಿರುತ್ತದೆ. ಅಂಥವರಿಗಾಗಿ ನಾವು ಗೋಮೂತ್ರದ ಉತ್ಪನ್ನಗಳನ್ನು ತಯಾರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕ್ಯಾನ್ಸರ್ ಮಹಾಮಾರಿಗೆ ಗೋಮೂತ್ರ ಬಳಕೆಯ ಬಗ್ಗೆ ಆಯುರ್ವೇದದಲ್ಲಿಯೂ ಉಲ್ಲೇಖವಿದೆ. ನಮ್ಮ ಸಂಸ್ಥೆಯು ಗೋಮೂತ್ರ ಬಳಸಿ ಮೌತ್ ಗಾರ್ಗಲ್ (ಬಾಯಿ ಮುಕ್ಕಳಿಸುವ ದ್ರಾವಣ) ತಯಾರಿಸಿದೆ ಎಂದ ರಾಜಾರಾಮ್ ಹೇಳಿದ್ದಾರೆ.
ಇದರಿಂದ ಹಲ್ಲು, ಒಸಡುಗಳ ಆರೋಗ್ಯ ಕಾಪಾಡಿಕೊಳ್ಳುವುದಲ್ಲದೇ, ಹಸುವಿನ ಮೂತ್ರ ಬಳಸಿ ಬಾಯಿ ವಾಸನೆಯನ್ನೂ ನಿವಾರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…