ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್ ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್ ಫ್ರೆಶನರ್ ಮಾತ್ರವಲ್ಲದೇ ಸುಗಂಧ ದೃವ್ಯ ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ.
ಶ್ರೀರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಅವರ ಸಲಹೆ ಪಡೆದು ಈ ಉತ್ಪನ್ನಗಳನ್ನು ತಯಾರಿಸಿರುವುದಾಗಿ ಸಂಸ್ಥೆಯು ಹೇಳಿಕೊಂಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೇಡ್ಲ ಆರ್ಗಾನಿಕ್ಸ್ ಸಂಸ್ಥೆಯ ಮುಖ್ಯಸ್ಥರಾದ ರಾಜಾರಾಮ್ ಅವರು, ಗೋಮೂತ್ರ ಬಳಕೆಗೆ ತುಂಬಾ ಕಷ್ಟ. ಅದನ್ನು ಹೇಗೆ ಕುಡಿಯುವುದು , ಹೇಗೆ ಬಳಸುವುದು ಎಂದು ಜನರಲ್ಲಿ ತಾತ್ಸಾರವಿರುತ್ತದೆ. ಅಂಥವರಿಗಾಗಿ ನಾವು ಗೋಮೂತ್ರದ ಉತ್ಪನ್ನಗಳನ್ನು ತಯಾರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕ್ಯಾನ್ಸರ್ ಮಹಾಮಾರಿಗೆ ಗೋಮೂತ್ರ ಬಳಕೆಯ ಬಗ್ಗೆ ಆಯುರ್ವೇದದಲ್ಲಿಯೂ ಉಲ್ಲೇಖವಿದೆ. ನಮ್ಮ ಸಂಸ್ಥೆಯು ಗೋಮೂತ್ರ ಬಳಸಿ ಮೌತ್ ಗಾರ್ಗಲ್ (ಬಾಯಿ ಮುಕ್ಕಳಿಸುವ ದ್ರಾವಣ) ತಯಾರಿಸಿದೆ ಎಂದ ರಾಜಾರಾಮ್ ಹೇಳಿದ್ದಾರೆ.
ಇದರಿಂದ ಹಲ್ಲು, ಒಸಡುಗಳ ಆರೋಗ್ಯ ಕಾಪಾಡಿಕೊಳ್ಳುವುದಲ್ಲದೇ, ಹಸುವಿನ ಮೂತ್ರ ಬಳಸಿ ಬಾಯಿ ವಾಸನೆಯನ್ನೂ ನಿವಾರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…