BREAKING NEWS

ಹಸು ಗಂಜಲದಿಂದ ಮೌತ್‌ ಫ್ರೆಶ್‌ನರ್‌: ಜೇಡ್ಲ ಆರ್ಗಾನಿಕ್ಸ್‌ ಸಂಸ್ಥೆಯಿಂದ ಹೊಸಾ ಆವಿಷ್ಕಾರ!

ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್‌  ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್‌ ಫ್ರೆಶನರ್‌ ಮಾತ್ರವಲ್ಲದೇ ಸುಗಂಧ ದೃವ್ಯ  ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ.

ಶ್ರೀರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಅವರ ಸಲಹೆ ಪಡೆದು ಈ ಉತ್ಪನ್ನಗಳನ್ನು ತಯಾರಿಸಿರುವುದಾಗಿ ಸಂಸ್ಥೆಯು ಹೇಳಿಕೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೇಡ್ಲ ಆರ್ಗಾನಿಕ್ಸ್‌ ಸಂಸ್ಥೆಯ ಮುಖ್ಯಸ್ಥರಾದ ರಾಜಾರಾಮ್‌ ಅವರು, ಗೋಮೂತ್ರ ಬಳಕೆಗೆ ತುಂಬಾ ಕಷ್ಟ. ಅದನ್ನು ಹೇಗೆ ಕುಡಿಯುವುದು , ಹೇಗೆ ಬಳಸುವುದು ಎಂದು ಜನರಲ್ಲಿ ತಾತ್ಸಾರವಿರುತ್ತದೆ. ಅಂಥವರಿಗಾಗಿ ನಾವು ಗೋಮೂತ್ರದ ಉತ್ಪನ್ನಗಳನ್ನು ತಯಾರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕ್ಯಾನ್ಸರ್‌ ಮಹಾಮಾರಿಗೆ ಗೋಮೂತ್ರ ಬಳಕೆಯ ಬಗ್ಗೆ ಆಯುರ್ವೇದದಲ್ಲಿಯೂ ಉಲ್ಲೇಖವಿದೆ. ನಮ್ಮ ಸಂಸ್ಥೆಯು ಗೋಮೂತ್ರ ಬಳಸಿ ಮೌತ್‌ ಗಾರ್ಗಲ್‌ (ಬಾಯಿ ಮುಕ್ಕಳಿಸುವ ದ್ರಾವಣ) ತಯಾರಿಸಿದೆ ಎಂದ ರಾಜಾರಾಮ್ ಹೇಳಿದ್ದಾರೆ.

ಇದರಿಂದ ಹಲ್ಲು, ಒಸಡುಗಳ ಆರೋಗ್ಯ ಕಾಪಾಡಿಕೊಳ್ಳುವುದಲ್ಲದೇ, ಹಸುವಿನ ಮೂತ್ರ ಬಳಸಿ ಬಾಯಿ ವಾಸನೆಯನ್ನೂ ನಿವಾರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

43 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago