ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿದೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿವೆ.
ಇನ್ನು ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ. ಘಟನಾ ಸ್ಥಳದ 1 ಕಿ.ಮೀ ದೂರದ ನಾಗುರಿ ಬಳಿ ಆಟೋ ಹತ್ತಿದ್ದು ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಡಿಜಿ-ಐಜಿಪಿ ಸೂದ್, ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಾತ್ರಿ ಸಿಎಂ ಭೇಟಿಯಾಗಿ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಇದು ಅನಿರೀಕ್ಷಿತವಾಗಿ ಸ್ಫೋಟಗೊಂಡಿರುವುದು ಅಲ್ಲ. ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲ್ಯಾನ್ ಮಾಡಲಾಗಿದೆ. ಸಾವು ನೋವು, ಹಾನಿ ಉಂಟು ಮಾಡಲು ಹೀಗೆ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಂದ ಕೇಂದ್ರ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…