BREAKING NEWS

ಚಲಿಸುತ್ತಿದ್ದ ಆಟೋ ಸ್ಫೋಟ : ಚುರುಕುಗೊಂಡ ತನಿಖೆ

ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿದೆ.

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿವೆ.

ಇನ್ನು ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ. ಘಟನಾ ಸ್ಥಳದ 1 ಕಿ.ಮೀ ದೂರದ ನಾಗುರಿ ಬಳಿ ಆಟೋ ಹತ್ತಿದ್ದು ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಡಿಜಿ-ಐಜಿಪಿ ಸೂದ್​, ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಾತ್ರಿ ಸಿಎಂ ಭೇಟಿಯಾಗಿ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್​​ ಮಾಡಿದ್ದಾರೆ. ಇದು ಅನಿರೀಕ್ಷಿತವಾಗಿ ಸ್ಫೋಟಗೊಂಡಿರುವುದು ಅಲ್ಲ. ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲ್ಯಾನ್​ ಮಾಡಲಾಗಿದೆ. ಸಾವು ನೋವು, ಹಾನಿ ಉಂಟು ಮಾಡಲು ಹೀಗೆ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಂದ ಕೇಂದ್ರ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್​ ಮೂಲಕ ಡಿಜಿ-ಐಜಿಪಿ ಪ್ರವೀಣ್ ಸೂದ್​ ಮಾಹಿತಿ ನೀಡಿದ್ದಾರೆ.

 

 

 

 

 

 

 

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

25 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

33 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

37 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

40 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

51 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago