ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿದೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿವೆ.
ಇನ್ನು ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ. ಘಟನಾ ಸ್ಥಳದ 1 ಕಿ.ಮೀ ದೂರದ ನಾಗುರಿ ಬಳಿ ಆಟೋ ಹತ್ತಿದ್ದು ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಡಿಜಿ-ಐಜಿಪಿ ಸೂದ್, ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಾತ್ರಿ ಸಿಎಂ ಭೇಟಿಯಾಗಿ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಇದು ಅನಿರೀಕ್ಷಿತವಾಗಿ ಸ್ಫೋಟಗೊಂಡಿರುವುದು ಅಲ್ಲ. ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲ್ಯಾನ್ ಮಾಡಲಾಗಿದೆ. ಸಾವು ನೋವು, ಹಾನಿ ಉಂಟು ಮಾಡಲು ಹೀಗೆ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಂದ ಕೇಂದ್ರ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…