BREAKING NEWS

ಪ್ರತ್ಯೇಕ ರಾಷ್ಟ್ರದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್‌ !

ನವದೆಹಲಿ : ಕೇಂದ್ರದ ಮಂಧ್ಯಂತರ ಬಜೆಟ್‌ ಬೆನ್ನಲ್ಲೇ  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್‌ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಈ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಹಣ ಉತ್ತರ ಭಾರತಕ್ಕೆ ಹಂಚುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಷ್ಟ್ರದ ಕೂಗು ಬೇಡಿಕೆ ಇಡಬೇಕಾಗುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಭಾರತ ಹಣವನ್ನು ಉತ್ತರ ಭಾರತಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ.ಹೀಗೆ ಮುಂದುವರೆದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತ್ಯೇಕ ದೇಶದ ಕೂಗು ಎತ್ತಿದ್ದಾರೆ.

ದಕ್ಷಿಣ ಭಾರತಕ್ಕೆ ಬಹಳಷ್ಟು ಅನ್ಯಾಯ ಆಗುತ್ತಿರುವುದನ್ನು ನಾವು ಪ್ರತಿಯೊಂದು ಹಂತದಲ್ಲಿ ನೋಡುತ್ತಿದ್ದೇವೆ. ನಮ್ಮ ಪಾಲು ಏನು ಸಿಗಬೇಕಾಗಿದೆ ಅಭಿವೃದ್ಧಿಯ ಹಣ ಸಿಗಬೇಕಾಗಿರುವುದು ಉತ್ತರ ಭಾರತದಲ್ಲಿ ಹಂಚುತ್ತಿದ್ದಾರೆ.

ನಮಗೆ ಎಲ್ಲಾ ವಿಚಾರಗಳು ಕೂಡ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ನಾವು ಖಂಡಿಸಲಿಲ್ಲವಾದರೆ ಪ್ರತ್ಯೇಕವಾದ ರಾಷ್ಟ್ರ ಬೇಡಿಕೆ ಇಡಬೇಕಾಗುತ್ತದೆ ಎಂದರು.

ಇವತ್ತಿನ ಹಣಕಾಸು ಹಂಚುತ್ತಿರುವ ಪರಿಸ್ಥಿತಿ ನೋಡಬೇಕಾದರೆ ಯಾವುದೇ ವಿಚಾರಗಳಾಗಲಿ ನಮ್ಮ ರಾಜ್ಯಗಳ ಹಣ ಉತ್ತರ ಭಾರತಕ್ಕೆ ಹೆಚ್ಚು ಕೊಡುತ್ತಿರುವುದು ನಮಗೆ ಅನ್ಯಾಯ ಆಗುತ್ತಿದೆ.

ನಮ್ಮ ಮೇಲೆ ಹಿಂದಿ ಹೇರಿಕೆ ಮಾಡತಕ್ಕದ್ದು ನಿನ್ನೆ ರಾಜ್ಯಪಾಲರು ನಮ್ಮ ಕನ್ನಡದ ನಾಮಫಲಕ ಅಳವಡಿಕೆ ಕುರಿತು ಸುಗ್ರೀವಾಜ್ಞೆಗೆ ಅಂಕಿತ ಹಾಕಲು ತಿರಸ್ಕಾರ ಮಾಡಿದರು ಏತಕ್ಕಾಗಿ ಅವರು ತಿರಸ್ಕಾರ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಎಲ್ಲಾ ರಾಜ್ಯದ ರಾಜ್ಯಪಾಲರು ಇದೇ ತರ ಭಾವನೆಗಳನ್ನು ವ್ಯಕ್ತಪಡಿಸುತ್ತಾ ಹೋದರೆ ನಮ್ಮ ಕನ್ನಡಿಗರಿಗೆ ಕೊಡುವ ಗೌರವ ಏನು? ತುಂಬಾ ನಮ್ಮ ಹಣಕಾಸು ಪರಿಸ್ಥಿತಿ ನಮ್ಮಿಂದ ನಾಲ್ಕು ಲಕ್ಷಕ್ಕೂ ಹೆಚ್ಚು ಕೋಟಿ ತೆರಿಗೆ ರೂಪದಲ್ಲಿ ಪಡೆಯುತ್ತಿದ್ದಾರೆ.

ನಮಗೆ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ ಇದು ಸರಿ ಹೋಗಲಿಲ್ಲ ಅಂದರೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ತಿಳಿಸಿದ್ದಾರೆ.

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

4 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

28 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

48 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago