ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ ಸಂಸದೀಯ ಚಟುವಟಿಕೆಗಳಿಗೆ ಜಾಗತಿಕ ಕೇಂದ್ರ ಬಿಂದುವಾಗಿ ಮತ್ತು ವಿವಿಧ ದೇಶಗಳ ಸಂಸತ್ತಿನ ಸದಸ್ಯರಿಂದ ಕೂಡಿದೆ. ಇದರ ಜತೆಗೆ, ಹವಾಮಾನ ಬದಲಾವಣೆ, ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಮಹಿಳಾ ಸಬಲೀಕರಣ ಮತ್ತು ಅನಾಥ ಮಕ್ಕಳ ಕಳ್ಳ ಸಾಗಣೆ ತಡೆಗಟ್ಟುವಿಕೆ ಸಂಬಂಧದ ಚರ್ಚೆಗಳಲ್ಲಿ ಸುಮಲತಾ ಭಾಗವಹಿಸಿದ್ದಾರೆ.
ಸುಮಲತಾ ಅವರು ಈ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಸಂಸತ್ತಿನ ಸದಸ್ಯರಾಗಿದ್ದು, ಐದು ವರ್ಷಗಳ ಅವಧಿಗೆ ಸದಸ್ಯರಾಗಿರುತ್ತಾರೆ.
ಅ. ೨೩ ರಿಂದ ೨೭ರವರೆಗೆ ಅಂಗೋಲಾದ ಲುವಾಂಡಾದಲ್ಲಿ ನಡೆಯುತ್ತಿರುವ ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಶೃಂಗಸಭೆಗೆ ಸ್ಪೀಕರ್ ಜತೆಗಿನ ನಿಯೋಗದ ಭಾಗವಾಗಿ ಸುಮಲತಾ ಭಾಗವಹಿಸಿದ್ದು, ನಾಮನಿರ್ದೇಶನ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಶೃಂಗಸಭೆಯ ಭಾಗವಾಗಿ, ಸುಮಲತಾ ಅವರು ಹಲವಾರು ಇತರೆ ದೇಶಗಳ ಸಂಸದರೊಂದಿಗೆ ಹಲವಾರು ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದು, ಜಾಗತಿಕ ಸಂಸದರ ನಡುವಿನ ಇಂತಹ ಸಂವಾದವು ಜಗತ್ತು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಗಳ ಕನಸಿನ ಯೋಜನೆಯಾದ `ವಿಕ್ಷಿತ್ ಭಾರತ್ ೨೦೪೭’ರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸುಮಲತಾ ಅಂಬರೀಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…