ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ ಸಂಸದೀಯ ಚಟುವಟಿಕೆಗಳಿಗೆ ಜಾಗತಿಕ ಕೇಂದ್ರ ಬಿಂದುವಾಗಿ ಮತ್ತು ವಿವಿಧ ದೇಶಗಳ ಸಂಸತ್ತಿನ ಸದಸ್ಯರಿಂದ ಕೂಡಿದೆ. ಇದರ ಜತೆಗೆ, ಹವಾಮಾನ ಬದಲಾವಣೆ, ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಮಹಿಳಾ ಸಬಲೀಕರಣ ಮತ್ತು ಅನಾಥ ಮಕ್ಕಳ ಕಳ್ಳ ಸಾಗಣೆ ತಡೆಗಟ್ಟುವಿಕೆ ಸಂಬಂಧದ ಚರ್ಚೆಗಳಲ್ಲಿ ಸುಮಲತಾ ಭಾಗವಹಿಸಿದ್ದಾರೆ.
ಸುಮಲತಾ ಅವರು ಈ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಸಂಸತ್ತಿನ ಸದಸ್ಯರಾಗಿದ್ದು, ಐದು ವರ್ಷಗಳ ಅವಧಿಗೆ ಸದಸ್ಯರಾಗಿರುತ್ತಾರೆ.
ಅ. ೨೩ ರಿಂದ ೨೭ರವರೆಗೆ ಅಂಗೋಲಾದ ಲುವಾಂಡಾದಲ್ಲಿ ನಡೆಯುತ್ತಿರುವ ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಶೃಂಗಸಭೆಗೆ ಸ್ಪೀಕರ್ ಜತೆಗಿನ ನಿಯೋಗದ ಭಾಗವಾಗಿ ಸುಮಲತಾ ಭಾಗವಹಿಸಿದ್ದು, ನಾಮನಿರ್ದೇಶನ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಶೃಂಗಸಭೆಯ ಭಾಗವಾಗಿ, ಸುಮಲತಾ ಅವರು ಹಲವಾರು ಇತರೆ ದೇಶಗಳ ಸಂಸದರೊಂದಿಗೆ ಹಲವಾರು ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದು, ಜಾಗತಿಕ ಸಂಸದರ ನಡುವಿನ ಇಂತಹ ಸಂವಾದವು ಜಗತ್ತು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಗಳ ಕನಸಿನ ಯೋಜನೆಯಾದ `ವಿಕ್ಷಿತ್ ಭಾರತ್ ೨೦೪೭’ರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸುಮಲತಾ ಅಂಬರೀಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…
ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…
ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…
ರಾಜೇಶ್ ಬೆಂಡರವಾಡಿ ಯಾರೂ ಹೆಚ್ಚು, ಯಾರೂ ಕಮ್ಮಿ ಇಲ್ಲ ಎಂಬಂತೆ ಚಾ.ನಗರದ ಈ ಇಬ್ಬರ ಹೆಸರು ಹೈಕಮಾಂಡ್ ಅಂಗಳದಲ್ಲಿ ಚಾಮರಾಜನಗರ:…