BREAKING NEWS

ಉನ್ನತ ಮಟ್ಟದ ಸಲಹಾ ಸಮಿತಿ ಸದಸ್ಯರಾಗಿ ಸಂಸದೆ ಸುಮಲತಾ ನೇಮಕ

ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ ಸಂಸದೀಯ ಚಟುವಟಿಕೆಗಳಿಗೆ ಜಾಗತಿಕ ಕೇಂದ್ರ ಬಿಂದುವಾಗಿ ಮತ್ತು ವಿವಿಧ ದೇಶಗಳ ಸಂಸತ್ತಿನ ಸದಸ್ಯರಿಂದ ಕೂಡಿದೆ. ಇದರ ಜತೆಗೆ, ಹವಾಮಾನ ಬದಲಾವಣೆ, ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಮಹಿಳಾ ಸಬಲೀಕರಣ ಮತ್ತು ಅನಾಥ ಮಕ್ಕಳ ಕಳ್ಳ ಸಾಗಣೆ ತಡೆಗಟ್ಟುವಿಕೆ ಸಂಬಂಧದ ಚರ್ಚೆಗಳಲ್ಲಿ ಸುಮಲತಾ ಭಾಗವಹಿಸಿದ್ದಾರೆ.

ಸುಮಲತಾ ಅವರು ಈ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಸಂಸತ್ತಿನ ಸದಸ್ಯರಾಗಿದ್ದು, ಐದು ವರ್ಷಗಳ ಅವಧಿಗೆ ಸದಸ್ಯರಾಗಿರುತ್ತಾರೆ.

ಅ. ೨೩ ರಿಂದ ೨೭ರವರೆಗೆ ಅಂಗೋಲಾದ ಲುವಾಂಡಾದಲ್ಲಿ ನಡೆಯುತ್ತಿರುವ ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಶೃಂಗಸಭೆಗೆ ಸ್ಪೀಕರ್ ಜತೆಗಿನ ನಿಯೋಗದ ಭಾಗವಾಗಿ ಸುಮಲತಾ ಭಾಗವಹಿಸಿದ್ದು, ನಾಮನಿರ್ದೇಶನ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಶೃಂಗಸಭೆಯ ಭಾಗವಾಗಿ, ಸುಮಲತಾ ಅವರು ಹಲವಾರು ಇತರೆ ದೇಶಗಳ ಸಂಸದರೊಂದಿಗೆ ಹಲವಾರು ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದು, ಜಾಗತಿಕ ಸಂಸದರ ನಡುವಿನ ಇಂತಹ ಸಂವಾದವು ಜಗತ್ತು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಗಳ ಕನಸಿನ ಯೋಜನೆಯಾದ `ವಿಕ್ಷಿತ್ ಭಾರತ್ ೨೦೪೭’ರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸುಮಲತಾ ಅಂಬರೀಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago