BREAKING NEWS

ಮಿಸ್ಟರ್ ನರೇಂದ್ರ ಮೋದಿ ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ: ಸಿಎಂ ವಾಗ್ದಾಳಿ

ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ ಎಂದಿದ್ದಾರೆ.

#AnswerMadiModi ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ,  ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಕೇಳಿದ್ದಾರೆ.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ.  ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ನರೇಂದ್ರ ಮೋದಿ ಅವರು ಜಾಣಕಿವುಡಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ ಎಂದು ಟೀಕಿಸಿದ್ದಾರೆ.

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ‘ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ.  ರಾಹುಲ್ ಗಾಂಧಿ ಅವರ  ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ  ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ನರೇಂದ್ರ ಮೋದಿ ಅವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

30 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

32 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

34 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

36 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

40 mins ago