BREAKING NEWS

ಮಿಸ್ಟರ್ ನರೇಂದ್ರ ಮೋದಿ ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ: ಸಿಎಂ ವಾಗ್ದಾಳಿ

ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ ಎಂದಿದ್ದಾರೆ.

#AnswerMadiModi ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ,  ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಕೇಳಿದ್ದಾರೆ.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ.  ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ನರೇಂದ್ರ ಮೋದಿ ಅವರು ಜಾಣಕಿವುಡಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ ಎಂದು ಟೀಕಿಸಿದ್ದಾರೆ.

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ‘ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ.  ರಾಹುಲ್ ಗಾಂಧಿ ಅವರ  ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ  ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ನರೇಂದ್ರ ಮೋದಿ ಅವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

3 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

4 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

5 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

5 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

8 hours ago