BREAKING NEWS

ನಾಯಕತ್ವದಿಂದ ಕೆಳಗಿಳಿದ ಎಂ.ಎಸ್‌ ಧೋನಿ: ಯುವ ಬ್ಯಾಟರ್‌ಗೆ ಸಿಎಸ್‌ಕೆ ನಾಯಕನ ಪಟ್ಟ!

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಚೆನ್ನೈ ತಂಡವನ್ನು ಐಪಿಎಲ್‌ನಲ್ಲಿ ಧೋನಿ ಐದು ಬಾರಿ ಚಾಂಪಿಯನ್‌ ಮಾಡಿದ್ದರು. ಧೋನಿ ನಾಯಕತ್ವದಲ್ಲಿ ಚೆನ್ನೈ 2010, 2011, 2018, 2021 ಮತ್ತು 2023ರಲ್ಲಿ ಚಾಂಪಿಯನ್ ಆಗಿದಲ್ಲದೆ, 2008, 2012, 2013, 2015 ಮತ್ತು 2019 ರಲ್ಲಿ ರನ್ನರ್​ಅಪ್ ಆಗಿತ್ತು.

ಐಪಿಎಲ್‌ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ನಾಯಕ ಧೋನಿ ತಮ್ಮ ಕ್ಯಾಪ್ಟನ್‌ ಪಟ್ಟವನ್ನು ತ್ಯಜಿಸಿದ್ದು, ಅವರ ಟ್ವೀಟ್‌ ಸದ್ಯ ವೈರಲ್‌ ಆಗುತ್ತಿದೆ. ಕೆಲ ದಿನಗಳ ಹಿಂದೆ ತಾವು ಹೊಸ ಸೀಸನ್‌ ಮತ್ತು ಹೊಸ ಜವಾಬ್ದಾರಿಯೊಂದಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಈ ಹಿಂದೆ ಟ್ವೀಟ್‌ ಮಾಡಿದ್ದರು.

ಕಳೆದ ಸೀಸನ್‌ನಲ್ಲಿ ಮಂಡಿ ನೋವಿನಿಂದ ಬಳಲುತ್ತಿದ್ದ ಧೋನಿ ಈ ಸೀಸನ್‌ ಆಡಲಿದ್ದಾರೆಯೇ ಎಂದು ಅನುಮಾನ ಮೂಡಿತ್ತು. ಅವೆಲ್ಲವನ್ನು ಸುಳ್ಳು ಮಾಡಿದ್ದ ಧೋನಿ ಈ ಸೀಸನ್‌ ಎಂಟ್ರಿ ಕೊಟ್ಟು ಭರ್ಜರಿ ತಯಾರಿ ಆರಂಭಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಆದರೆ, ಈಗ ದಿಢೀರ್‌ ನಾಯಕತ್ವ ತೊರೆದಿರುವುದು ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ.

ಪ್ರತಿ ಸೀಸನ್‌ನಂತೆ ಈ ಸೀಸನ್​ನಲ್ಲಿಯೂ ಎಲ್ಲಾ 10 ತಂಡಗಳ ನಾಯಕರು ಫೋಟೋಶೂಟ್‌ಗೆ ಬಂದಿದ್ದರು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಋತುರಾಜ್‌ ಕಾಣಿಸಿಕೊಂಡಿದ್ದರು. ಇದೀಗ ಸಿಎಸ್​ಕೆ ತಂಡಕ್ಕೆ ಋತುರಾಜ್‌ ನಾಯಕರಾಗಿ ಘೋಷಣೆಯಾಗಿದ್ದು, ಈ ಕುರಿತು ಫ್ರಾಂಚೈಸಿ ಕೂಡ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

14 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

17 hours ago