BREAKING NEWS

ನಾಯಕತ್ವದಿಂದ ಕೆಳಗಿಳಿದ ಎಂ.ಎಸ್‌ ಧೋನಿ: ಯುವ ಬ್ಯಾಟರ್‌ಗೆ ಸಿಎಸ್‌ಕೆ ನಾಯಕನ ಪಟ್ಟ!

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಚೆನ್ನೈ ತಂಡವನ್ನು ಐಪಿಎಲ್‌ನಲ್ಲಿ ಧೋನಿ ಐದು ಬಾರಿ ಚಾಂಪಿಯನ್‌ ಮಾಡಿದ್ದರು. ಧೋನಿ ನಾಯಕತ್ವದಲ್ಲಿ ಚೆನ್ನೈ 2010, 2011, 2018, 2021 ಮತ್ತು 2023ರಲ್ಲಿ ಚಾಂಪಿಯನ್ ಆಗಿದಲ್ಲದೆ, 2008, 2012, 2013, 2015 ಮತ್ತು 2019 ರಲ್ಲಿ ರನ್ನರ್​ಅಪ್ ಆಗಿತ್ತು.

ಐಪಿಎಲ್‌ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ನಾಯಕ ಧೋನಿ ತಮ್ಮ ಕ್ಯಾಪ್ಟನ್‌ ಪಟ್ಟವನ್ನು ತ್ಯಜಿಸಿದ್ದು, ಅವರ ಟ್ವೀಟ್‌ ಸದ್ಯ ವೈರಲ್‌ ಆಗುತ್ತಿದೆ. ಕೆಲ ದಿನಗಳ ಹಿಂದೆ ತಾವು ಹೊಸ ಸೀಸನ್‌ ಮತ್ತು ಹೊಸ ಜವಾಬ್ದಾರಿಯೊಂದಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಈ ಹಿಂದೆ ಟ್ವೀಟ್‌ ಮಾಡಿದ್ದರು.

ಕಳೆದ ಸೀಸನ್‌ನಲ್ಲಿ ಮಂಡಿ ನೋವಿನಿಂದ ಬಳಲುತ್ತಿದ್ದ ಧೋನಿ ಈ ಸೀಸನ್‌ ಆಡಲಿದ್ದಾರೆಯೇ ಎಂದು ಅನುಮಾನ ಮೂಡಿತ್ತು. ಅವೆಲ್ಲವನ್ನು ಸುಳ್ಳು ಮಾಡಿದ್ದ ಧೋನಿ ಈ ಸೀಸನ್‌ ಎಂಟ್ರಿ ಕೊಟ್ಟು ಭರ್ಜರಿ ತಯಾರಿ ಆರಂಭಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಆದರೆ, ಈಗ ದಿಢೀರ್‌ ನಾಯಕತ್ವ ತೊರೆದಿರುವುದು ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ.

ಪ್ರತಿ ಸೀಸನ್‌ನಂತೆ ಈ ಸೀಸನ್​ನಲ್ಲಿಯೂ ಎಲ್ಲಾ 10 ತಂಡಗಳ ನಾಯಕರು ಫೋಟೋಶೂಟ್‌ಗೆ ಬಂದಿದ್ದರು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಋತುರಾಜ್‌ ಕಾಣಿಸಿಕೊಂಡಿದ್ದರು. ಇದೀಗ ಸಿಎಸ್​ಕೆ ತಂಡಕ್ಕೆ ಋತುರಾಜ್‌ ನಾಯಕರಾಗಿ ಘೋಷಣೆಯಾಗಿದ್ದು, ಈ ಕುರಿತು ಫ್ರಾಂಚೈಸಿ ಕೂಡ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

3 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

3 hours ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

19 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

19 hours ago