BREAKING NEWS

ನಾಯಕತ್ವದಿಂದ ಕೆಳಗಿಳಿದ ಎಂ.ಎಸ್‌ ಧೋನಿ: ಯುವ ಬ್ಯಾಟರ್‌ಗೆ ಸಿಎಸ್‌ಕೆ ನಾಯಕನ ಪಟ್ಟ!

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಚೆನ್ನೈ ತಂಡವನ್ನು ಐಪಿಎಲ್‌ನಲ್ಲಿ ಧೋನಿ ಐದು ಬಾರಿ ಚಾಂಪಿಯನ್‌ ಮಾಡಿದ್ದರು. ಧೋನಿ ನಾಯಕತ್ವದಲ್ಲಿ ಚೆನ್ನೈ 2010, 2011, 2018, 2021 ಮತ್ತು 2023ರಲ್ಲಿ ಚಾಂಪಿಯನ್ ಆಗಿದಲ್ಲದೆ, 2008, 2012, 2013, 2015 ಮತ್ತು 2019 ರಲ್ಲಿ ರನ್ನರ್​ಅಪ್ ಆಗಿತ್ತು.

ಐಪಿಎಲ್‌ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ನಾಯಕ ಧೋನಿ ತಮ್ಮ ಕ್ಯಾಪ್ಟನ್‌ ಪಟ್ಟವನ್ನು ತ್ಯಜಿಸಿದ್ದು, ಅವರ ಟ್ವೀಟ್‌ ಸದ್ಯ ವೈರಲ್‌ ಆಗುತ್ತಿದೆ. ಕೆಲ ದಿನಗಳ ಹಿಂದೆ ತಾವು ಹೊಸ ಸೀಸನ್‌ ಮತ್ತು ಹೊಸ ಜವಾಬ್ದಾರಿಯೊಂದಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಈ ಹಿಂದೆ ಟ್ವೀಟ್‌ ಮಾಡಿದ್ದರು.

ಕಳೆದ ಸೀಸನ್‌ನಲ್ಲಿ ಮಂಡಿ ನೋವಿನಿಂದ ಬಳಲುತ್ತಿದ್ದ ಧೋನಿ ಈ ಸೀಸನ್‌ ಆಡಲಿದ್ದಾರೆಯೇ ಎಂದು ಅನುಮಾನ ಮೂಡಿತ್ತು. ಅವೆಲ್ಲವನ್ನು ಸುಳ್ಳು ಮಾಡಿದ್ದ ಧೋನಿ ಈ ಸೀಸನ್‌ ಎಂಟ್ರಿ ಕೊಟ್ಟು ಭರ್ಜರಿ ತಯಾರಿ ಆರಂಭಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಆದರೆ, ಈಗ ದಿಢೀರ್‌ ನಾಯಕತ್ವ ತೊರೆದಿರುವುದು ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ.

ಪ್ರತಿ ಸೀಸನ್‌ನಂತೆ ಈ ಸೀಸನ್​ನಲ್ಲಿಯೂ ಎಲ್ಲಾ 10 ತಂಡಗಳ ನಾಯಕರು ಫೋಟೋಶೂಟ್‌ಗೆ ಬಂದಿದ್ದರು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಋತುರಾಜ್‌ ಕಾಣಿಸಿಕೊಂಡಿದ್ದರು. ಇದೀಗ ಸಿಎಸ್​ಕೆ ತಂಡಕ್ಕೆ ಋತುರಾಜ್‌ ನಾಯಕರಾಗಿ ಘೋಷಣೆಯಾಗಿದ್ದು, ಈ ಕುರಿತು ಫ್ರಾಂಚೈಸಿ ಕೂಡ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago