BREAKING NEWS

ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಠಾಕ್ರೆ ಆಪ್ತರ ನಿವಾಸದ ಮೇಲೆ ಇ.ಡಿ ದಾಳಿ

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.

ನಗರದ 15 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ. ಆದಿತ್ಯ ಠಾಕ್ರೆ ಅವರ ಸಹವರ್ತಿ ಸೂರಜ್ ಚವಾಣ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯಸಭಾ ಸಂಸದ ಮತ್ತು ಯುಬಿಟಿ ಸೇನಾ ವಕ್ತಾರ ಸಂಜಯ್ ರಾವುತ್ ಅವರ ನಿಕಟವರ್ತಿ ಸುಜಿತ್ ಪಾಟ್ಕರ್ ಸೇರಿದಂತೆ ಐಎಎಸ್ ಸಂಜೀವ್ ಜೈಸ್ವಾಲ್ ಮತ್ತು ಇತರ 14 ಮಂದಿಯ ಸ್ಥಳಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

ಇದಕ್ಕೂ ಮುನ್ನ ಇ.ಡಿ ಸುಜಿತ್ ಪಾಟ್ಕರ್, ಸಂಸದ ಸಂಜಯ್ ರಾವತ್ ಸೇರಿದಂತೆ ಮತ್ತಿತರ ಮೇಲೆ ಅಕ್ರಮ ಹಣ ಪ್ರಕರಣವನ್ನು ದಾಖಲಿಸಿತ್ತು. ಆರೋಗ್ಯ ಕ್ಷೇತ್ರದಲ್ಲಿ ಅನುಭವವಿಲ್ಲದಿದ್ದರೂ ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಮುಂಬೈ ಕೋವಿಡ್‌ ಫೀಲ್ಡ್‌ ಆಸ್ಪತ್ರೆಯ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಏನಿದು ದೂರು?

ಬಿಜೆಪಿ ನಾಯಕ ಕಿರಿತ್ ಸೋಮಜ್ಯ ಅವರು ಲೈಫ್‌ಲೈನ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸರ್ವಿಸ್ ಹಾಗೂ ಸಜಿತ್ ಪಾಟ್ಕರ್ ಹಾಗೂ ಅವರ ಸಹಚರರ ವಿರುದ್ಧ ನಕಲಿ ಸಹಿ ಪ್ರಕರಣವನ್ನು ದಾಖಲಿಸಿದ್ದರು. ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಇವರು ಆರೋಗ್ಯ ಕ್ಷೇತ್ರದ ಬಗ್ಗೆ ಅನುಭವ ಇಲ್ಲದಿದ್ದರೂ ಕೋವಿಡ್ ಆಸ್ಪತ್ರೆಗಳನ್ನು ನಿರ್ವಹಿಸುವುದಾಗಿ ಬಿಎಂಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ತನಿಖೆಗೆ ವರ್ಗಾಯಿಸಿದ್ದರು. ಜೊತೆಗೆ ಅಕ್ರಮ ಹಣ ವರ್ಗಾವಣೆ ಕೇಸನ್ನು ದಾಖಲಿಸಿತ್ತು. ಪಾಟ್ಕರ್ ಅವರ ಮನೆಯಲ್ಲಿ ಇಡಿ ನಡೆಸಿದ ದಾಳಿಯ ಸಮಯದಲ್ಲಿ, ಕೋವಿಡ್ ಕ್ಷೇತ್ರ ಆಸ್ಪತ್ರೆಗಳ ನಿರ್ವಹಣೆಗಾಗಿ ಪಾಟ್ಕರ್ ಬಿಎಂಸಿಯೊಂದಿಗೆ ಸಹಿ ಮಾಡಿದ ಒಪ್ಪಂದದ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಇದಕ್ಕಾಗಿ ಪಾಟ್ಕರ್ 38 ಕೋಟಿ ರೂಗಳನ್ನು ನೀಡಿದ್ದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago