BREAKING NEWS

ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಠಾಕ್ರೆ ಆಪ್ತರ ನಿವಾಸದ ಮೇಲೆ ಇ.ಡಿ ದಾಳಿ

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.

ನಗರದ 15 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ. ಆದಿತ್ಯ ಠಾಕ್ರೆ ಅವರ ಸಹವರ್ತಿ ಸೂರಜ್ ಚವಾಣ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯಸಭಾ ಸಂಸದ ಮತ್ತು ಯುಬಿಟಿ ಸೇನಾ ವಕ್ತಾರ ಸಂಜಯ್ ರಾವುತ್ ಅವರ ನಿಕಟವರ್ತಿ ಸುಜಿತ್ ಪಾಟ್ಕರ್ ಸೇರಿದಂತೆ ಐಎಎಸ್ ಸಂಜೀವ್ ಜೈಸ್ವಾಲ್ ಮತ್ತು ಇತರ 14 ಮಂದಿಯ ಸ್ಥಳಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

ಇದಕ್ಕೂ ಮುನ್ನ ಇ.ಡಿ ಸುಜಿತ್ ಪಾಟ್ಕರ್, ಸಂಸದ ಸಂಜಯ್ ರಾವತ್ ಸೇರಿದಂತೆ ಮತ್ತಿತರ ಮೇಲೆ ಅಕ್ರಮ ಹಣ ಪ್ರಕರಣವನ್ನು ದಾಖಲಿಸಿತ್ತು. ಆರೋಗ್ಯ ಕ್ಷೇತ್ರದಲ್ಲಿ ಅನುಭವವಿಲ್ಲದಿದ್ದರೂ ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಮುಂಬೈ ಕೋವಿಡ್‌ ಫೀಲ್ಡ್‌ ಆಸ್ಪತ್ರೆಯ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಏನಿದು ದೂರು?

ಬಿಜೆಪಿ ನಾಯಕ ಕಿರಿತ್ ಸೋಮಜ್ಯ ಅವರು ಲೈಫ್‌ಲೈನ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸರ್ವಿಸ್ ಹಾಗೂ ಸಜಿತ್ ಪಾಟ್ಕರ್ ಹಾಗೂ ಅವರ ಸಹಚರರ ವಿರುದ್ಧ ನಕಲಿ ಸಹಿ ಪ್ರಕರಣವನ್ನು ದಾಖಲಿಸಿದ್ದರು. ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಇವರು ಆರೋಗ್ಯ ಕ್ಷೇತ್ರದ ಬಗ್ಗೆ ಅನುಭವ ಇಲ್ಲದಿದ್ದರೂ ಕೋವಿಡ್ ಆಸ್ಪತ್ರೆಗಳನ್ನು ನಿರ್ವಹಿಸುವುದಾಗಿ ಬಿಎಂಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ತನಿಖೆಗೆ ವರ್ಗಾಯಿಸಿದ್ದರು. ಜೊತೆಗೆ ಅಕ್ರಮ ಹಣ ವರ್ಗಾವಣೆ ಕೇಸನ್ನು ದಾಖಲಿಸಿತ್ತು. ಪಾಟ್ಕರ್ ಅವರ ಮನೆಯಲ್ಲಿ ಇಡಿ ನಡೆಸಿದ ದಾಳಿಯ ಸಮಯದಲ್ಲಿ, ಕೋವಿಡ್ ಕ್ಷೇತ್ರ ಆಸ್ಪತ್ರೆಗಳ ನಿರ್ವಹಣೆಗಾಗಿ ಪಾಟ್ಕರ್ ಬಿಎಂಸಿಯೊಂದಿಗೆ ಸಹಿ ಮಾಡಿದ ಒಪ್ಪಂದದ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಇದಕ್ಕಾಗಿ ಪಾಟ್ಕರ್ 38 ಕೋಟಿ ರೂಗಳನ್ನು ನೀಡಿದ್ದರು.

andolanait

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

40 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

48 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

49 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

51 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

54 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

57 mins ago