BREAKING NEWS

ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಠಾಕ್ರೆ ಆಪ್ತರ ನಿವಾಸದ ಮೇಲೆ ಇ.ಡಿ ದಾಳಿ

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.

ನಗರದ 15 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ. ಆದಿತ್ಯ ಠಾಕ್ರೆ ಅವರ ಸಹವರ್ತಿ ಸೂರಜ್ ಚವಾಣ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯಸಭಾ ಸಂಸದ ಮತ್ತು ಯುಬಿಟಿ ಸೇನಾ ವಕ್ತಾರ ಸಂಜಯ್ ರಾವುತ್ ಅವರ ನಿಕಟವರ್ತಿ ಸುಜಿತ್ ಪಾಟ್ಕರ್ ಸೇರಿದಂತೆ ಐಎಎಸ್ ಸಂಜೀವ್ ಜೈಸ್ವಾಲ್ ಮತ್ತು ಇತರ 14 ಮಂದಿಯ ಸ್ಥಳಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

ಇದಕ್ಕೂ ಮುನ್ನ ಇ.ಡಿ ಸುಜಿತ್ ಪಾಟ್ಕರ್, ಸಂಸದ ಸಂಜಯ್ ರಾವತ್ ಸೇರಿದಂತೆ ಮತ್ತಿತರ ಮೇಲೆ ಅಕ್ರಮ ಹಣ ಪ್ರಕರಣವನ್ನು ದಾಖಲಿಸಿತ್ತು. ಆರೋಗ್ಯ ಕ್ಷೇತ್ರದಲ್ಲಿ ಅನುಭವವಿಲ್ಲದಿದ್ದರೂ ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಮುಂಬೈ ಕೋವಿಡ್‌ ಫೀಲ್ಡ್‌ ಆಸ್ಪತ್ರೆಯ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಏನಿದು ದೂರು?

ಬಿಜೆಪಿ ನಾಯಕ ಕಿರಿತ್ ಸೋಮಜ್ಯ ಅವರು ಲೈಫ್‌ಲೈನ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸರ್ವಿಸ್ ಹಾಗೂ ಸಜಿತ್ ಪಾಟ್ಕರ್ ಹಾಗೂ ಅವರ ಸಹಚರರ ವಿರುದ್ಧ ನಕಲಿ ಸಹಿ ಪ್ರಕರಣವನ್ನು ದಾಖಲಿಸಿದ್ದರು. ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಇವರು ಆರೋಗ್ಯ ಕ್ಷೇತ್ರದ ಬಗ್ಗೆ ಅನುಭವ ಇಲ್ಲದಿದ್ದರೂ ಕೋವಿಡ್ ಆಸ್ಪತ್ರೆಗಳನ್ನು ನಿರ್ವಹಿಸುವುದಾಗಿ ಬಿಎಂಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ತನಿಖೆಗೆ ವರ್ಗಾಯಿಸಿದ್ದರು. ಜೊತೆಗೆ ಅಕ್ರಮ ಹಣ ವರ್ಗಾವಣೆ ಕೇಸನ್ನು ದಾಖಲಿಸಿತ್ತು. ಪಾಟ್ಕರ್ ಅವರ ಮನೆಯಲ್ಲಿ ಇಡಿ ನಡೆಸಿದ ದಾಳಿಯ ಸಮಯದಲ್ಲಿ, ಕೋವಿಡ್ ಕ್ಷೇತ್ರ ಆಸ್ಪತ್ರೆಗಳ ನಿರ್ವಹಣೆಗಾಗಿ ಪಾಟ್ಕರ್ ಬಿಎಂಸಿಯೊಂದಿಗೆ ಸಹಿ ಮಾಡಿದ ಒಪ್ಪಂದದ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಇದಕ್ಕಾಗಿ ಪಾಟ್ಕರ್ 38 ಕೋಟಿ ರೂಗಳನ್ನು ನೀಡಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago