BREAKING NEWS

ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಠಾಕ್ರೆ ಆಪ್ತರ ನಿವಾಸದ ಮೇಲೆ ಇ.ಡಿ ದಾಳಿ

ಮುಂಬೈ: ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.

ನಗರದ 15 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ. ಆದಿತ್ಯ ಠಾಕ್ರೆ ಅವರ ಸಹವರ್ತಿ ಸೂರಜ್ ಚವಾಣ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯಸಭಾ ಸಂಸದ ಮತ್ತು ಯುಬಿಟಿ ಸೇನಾ ವಕ್ತಾರ ಸಂಜಯ್ ರಾವುತ್ ಅವರ ನಿಕಟವರ್ತಿ ಸುಜಿತ್ ಪಾಟ್ಕರ್ ಸೇರಿದಂತೆ ಐಎಎಸ್ ಸಂಜೀವ್ ಜೈಸ್ವಾಲ್ ಮತ್ತು ಇತರ 14 ಮಂದಿಯ ಸ್ಥಳಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

ಇದಕ್ಕೂ ಮುನ್ನ ಇ.ಡಿ ಸುಜಿತ್ ಪಾಟ್ಕರ್, ಸಂಸದ ಸಂಜಯ್ ರಾವತ್ ಸೇರಿದಂತೆ ಮತ್ತಿತರ ಮೇಲೆ ಅಕ್ರಮ ಹಣ ಪ್ರಕರಣವನ್ನು ದಾಖಲಿಸಿತ್ತು. ಆರೋಗ್ಯ ಕ್ಷೇತ್ರದಲ್ಲಿ ಅನುಭವವಿಲ್ಲದಿದ್ದರೂ ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಮುಂಬೈ ಕೋವಿಡ್‌ ಫೀಲ್ಡ್‌ ಆಸ್ಪತ್ರೆಯ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಏನಿದು ದೂರು?

ಬಿಜೆಪಿ ನಾಯಕ ಕಿರಿತ್ ಸೋಮಜ್ಯ ಅವರು ಲೈಫ್‌ಲೈನ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸರ್ವಿಸ್ ಹಾಗೂ ಸಜಿತ್ ಪಾಟ್ಕರ್ ಹಾಗೂ ಅವರ ಸಹಚರರ ವಿರುದ್ಧ ನಕಲಿ ಸಹಿ ಪ್ರಕರಣವನ್ನು ದಾಖಲಿಸಿದ್ದರು. ಕೋವಿಡ್ ಪ್ಯಾಂಡಮಿಕ್ ಸಮಯದಲ್ಲಿ ಇವರು ಆರೋಗ್ಯ ಕ್ಷೇತ್ರದ ಬಗ್ಗೆ ಅನುಭವ ಇಲ್ಲದಿದ್ದರೂ ಕೋವಿಡ್ ಆಸ್ಪತ್ರೆಗಳನ್ನು ನಿರ್ವಹಿಸುವುದಾಗಿ ಬಿಎಂಸಿ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ತನಿಖೆಗೆ ವರ್ಗಾಯಿಸಿದ್ದರು. ಜೊತೆಗೆ ಅಕ್ರಮ ಹಣ ವರ್ಗಾವಣೆ ಕೇಸನ್ನು ದಾಖಲಿಸಿತ್ತು. ಪಾಟ್ಕರ್ ಅವರ ಮನೆಯಲ್ಲಿ ಇಡಿ ನಡೆಸಿದ ದಾಳಿಯ ಸಮಯದಲ್ಲಿ, ಕೋವಿಡ್ ಕ್ಷೇತ್ರ ಆಸ್ಪತ್ರೆಗಳ ನಿರ್ವಹಣೆಗಾಗಿ ಪಾಟ್ಕರ್ ಬಿಎಂಸಿಯೊಂದಿಗೆ ಸಹಿ ಮಾಡಿದ ಒಪ್ಪಂದದ ದಾಖಲೆಯನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಇದಕ್ಕಾಗಿ ಪಾಟ್ಕರ್ 38 ಕೋಟಿ ರೂಗಳನ್ನು ನೀಡಿದ್ದರು.

andolanait

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

56 mins ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

2 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

7 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

8 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

8 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

9 hours ago