BREAKING NEWS

Ranji Trophy: 42ನೇ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ

ಮುಂಬೈ: ಅಜಿಂಕ್ಯ ರಹಾನೆ ನಾಯಕತ್ವದ ಮುಂಬೈ ತಂಡವು ವಿದರ್ಭ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ 169 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಬರೋಬ್ಬರಿ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದು ಬೀಗಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕೊನೆಯ ದಿನದಾಟದಲ್ಲಿ 538 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ವಿದರ್ಭ, 134.3 ಓವರ್‌ಗಳಲ್ಲಿ 368 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ವಿದರ್ಭ ಪರ ಅಮೋಘ ಶತಕ ಗಳಿಸಿದ ಅಕ್ಷಯ್ ವಾಡ್ಕರ್ (102) ಏಕಾಂಗಿ ಹೋರಾಟ ಮಾಡಿದರು. ಇವರಿಗೆ ಹರ್ಷ್‌ ದುಬೆ (65) ಕೊಂಚ ಸಾಥ್‌ ನೀಡಿದರು. ಅವರಿಬ್ಬರು ಆರನೇ ವಿಕೆಟ್‌ಗೆ 130 ರನ್‌ಗಳ ದಿಟ್ಟ ಹೋರಾಟ ನೀಡಿ ತಂಡ ಗೆಲ್ಲುವ ವಿಶ್ವಾಸ ತೋರಿದರು.

ಆದರೆ ಈ ಇಬ್ಬರು ಜೋಡಿಯ ವಿಕೆಟ್ ಪತನದೊಂದಿಗೆ ದಿಢೀರ್ ಕುಸಿತ ಕಂಡ ವಿದರ್ಭ, 14 ರನ್ ಅಂತರದಲ್ಲಿ ಕೊನೆಯ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಮುಂಬೈ ಪರ ತನುಷ್ ಕೋಟಿಯನ್ ನಾಲ್ಕು, ಮುಷೀರ್ ಖಾನ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಗಳಿಸಿ ಗೆಲುವಿಗೆ ಶ್ರಮಿಸಿದರು.

ಫೈನಲ್‌ ಪಂದ್ಯದಲ್ಲಿ ಶತಕದಾಟ ಆಡಿದ ಮುಷೀರ್‌ ಖಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್ ವಿವರ:

ಮುಂಬೈ ಮೊದಲ ಇನಿಂಗ್ಸ್‌ : 224/10 (64.3 ಓವರ್‌) (ತುಷಾರ್ 75, ಯಶ್ ಠಾಕೂರ್ 54/3)

ವಿದರ್ಭ ಮೊದಲ ಇನಿಂಗ್ಸ್ : 105/10 (64.3 ಓವರ್‌) (ಯಷ್ ರಾಥೋಡ್ 27, ಕೋಟಿಯನ್ 7/3)

ಮುಂಬೈ ಎರಡನೇ ಇನಿಂಗ್ಸ್ : 418/10 (130.2 ಓವರ್‌) (ಮುಷೀರ್ ಖಾನ್ 136, ಶ್ರೇಯಸ್ 95, ರಹಾನೆ 73, ಹರ್ಷ್‌ ದುಬೆ 144/5)

ವಿದರ್ಭ ಎರಡನೇ ಇನಿಂಗ್ : 368/10 (134.3 ಓವರ್‌) (ವಾಡ್ಕರ್‌ 102. ಕೋಟಿಯನ್ 95/4)

ಪಂದ್ಯ ಶ್ರೇಷ್ಠ: ಮುಷೀರ್‌ ಖಾನ್‌
ಸರಣಿ ಶ್ರೇಷ್ಠ: ತನುಷ್ ಕೋಟ್ಯಾನ್

https://x.com/BCCIdomestic/status/1768182725377397038?s=20

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

7 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago