BREAKING NEWS

Ranji Trophy: 42ನೇ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ

ಮುಂಬೈ: ಅಜಿಂಕ್ಯ ರಹಾನೆ ನಾಯಕತ್ವದ ಮುಂಬೈ ತಂಡವು ವಿದರ್ಭ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ 169 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಬರೋಬ್ಬರಿ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದು ಬೀಗಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕೊನೆಯ ದಿನದಾಟದಲ್ಲಿ 538 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ವಿದರ್ಭ, 134.3 ಓವರ್‌ಗಳಲ್ಲಿ 368 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ವಿದರ್ಭ ಪರ ಅಮೋಘ ಶತಕ ಗಳಿಸಿದ ಅಕ್ಷಯ್ ವಾಡ್ಕರ್ (102) ಏಕಾಂಗಿ ಹೋರಾಟ ಮಾಡಿದರು. ಇವರಿಗೆ ಹರ್ಷ್‌ ದುಬೆ (65) ಕೊಂಚ ಸಾಥ್‌ ನೀಡಿದರು. ಅವರಿಬ್ಬರು ಆರನೇ ವಿಕೆಟ್‌ಗೆ 130 ರನ್‌ಗಳ ದಿಟ್ಟ ಹೋರಾಟ ನೀಡಿ ತಂಡ ಗೆಲ್ಲುವ ವಿಶ್ವಾಸ ತೋರಿದರು.

ಆದರೆ ಈ ಇಬ್ಬರು ಜೋಡಿಯ ವಿಕೆಟ್ ಪತನದೊಂದಿಗೆ ದಿಢೀರ್ ಕುಸಿತ ಕಂಡ ವಿದರ್ಭ, 14 ರನ್ ಅಂತರದಲ್ಲಿ ಕೊನೆಯ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಮುಂಬೈ ಪರ ತನುಷ್ ಕೋಟಿಯನ್ ನಾಲ್ಕು, ಮುಷೀರ್ ಖಾನ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಗಳಿಸಿ ಗೆಲುವಿಗೆ ಶ್ರಮಿಸಿದರು.

ಫೈನಲ್‌ ಪಂದ್ಯದಲ್ಲಿ ಶತಕದಾಟ ಆಡಿದ ಮುಷೀರ್‌ ಖಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್ ವಿವರ:

ಮುಂಬೈ ಮೊದಲ ಇನಿಂಗ್ಸ್‌ : 224/10 (64.3 ಓವರ್‌) (ತುಷಾರ್ 75, ಯಶ್ ಠಾಕೂರ್ 54/3)

ವಿದರ್ಭ ಮೊದಲ ಇನಿಂಗ್ಸ್ : 105/10 (64.3 ಓವರ್‌) (ಯಷ್ ರಾಥೋಡ್ 27, ಕೋಟಿಯನ್ 7/3)

ಮುಂಬೈ ಎರಡನೇ ಇನಿಂಗ್ಸ್ : 418/10 (130.2 ಓವರ್‌) (ಮುಷೀರ್ ಖಾನ್ 136, ಶ್ರೇಯಸ್ 95, ರಹಾನೆ 73, ಹರ್ಷ್‌ ದುಬೆ 144/5)

ವಿದರ್ಭ ಎರಡನೇ ಇನಿಂಗ್ : 368/10 (134.3 ಓವರ್‌) (ವಾಡ್ಕರ್‌ 102. ಕೋಟಿಯನ್ 95/4)

ಪಂದ್ಯ ಶ್ರೇಷ್ಠ: ಮುಷೀರ್‌ ಖಾನ್‌
ಸರಣಿ ಶ್ರೇಷ್ಠ: ತನುಷ್ ಕೋಟ್ಯಾನ್

https://x.com/BCCIdomestic/status/1768182725377397038?s=20

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

3 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

4 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

4 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

4 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

5 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

5 hours ago