BREAKING NEWS

Ranji Trophy: 42ನೇ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ

ಮುಂಬೈ: ಅಜಿಂಕ್ಯ ರಹಾನೆ ನಾಯಕತ್ವದ ಮುಂಬೈ ತಂಡವು ವಿದರ್ಭ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ 169 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಬರೋಬ್ಬರಿ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದು ಬೀಗಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕೊನೆಯ ದಿನದಾಟದಲ್ಲಿ 538 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ವಿದರ್ಭ, 134.3 ಓವರ್‌ಗಳಲ್ಲಿ 368 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ವಿದರ್ಭ ಪರ ಅಮೋಘ ಶತಕ ಗಳಿಸಿದ ಅಕ್ಷಯ್ ವಾಡ್ಕರ್ (102) ಏಕಾಂಗಿ ಹೋರಾಟ ಮಾಡಿದರು. ಇವರಿಗೆ ಹರ್ಷ್‌ ದುಬೆ (65) ಕೊಂಚ ಸಾಥ್‌ ನೀಡಿದರು. ಅವರಿಬ್ಬರು ಆರನೇ ವಿಕೆಟ್‌ಗೆ 130 ರನ್‌ಗಳ ದಿಟ್ಟ ಹೋರಾಟ ನೀಡಿ ತಂಡ ಗೆಲ್ಲುವ ವಿಶ್ವಾಸ ತೋರಿದರು.

ಆದರೆ ಈ ಇಬ್ಬರು ಜೋಡಿಯ ವಿಕೆಟ್ ಪತನದೊಂದಿಗೆ ದಿಢೀರ್ ಕುಸಿತ ಕಂಡ ವಿದರ್ಭ, 14 ರನ್ ಅಂತರದಲ್ಲಿ ಕೊನೆಯ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಮುಂಬೈ ಪರ ತನುಷ್ ಕೋಟಿಯನ್ ನಾಲ್ಕು, ಮುಷೀರ್ ಖಾನ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಗಳಿಸಿ ಗೆಲುವಿಗೆ ಶ್ರಮಿಸಿದರು.

ಫೈನಲ್‌ ಪಂದ್ಯದಲ್ಲಿ ಶತಕದಾಟ ಆಡಿದ ಮುಷೀರ್‌ ಖಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್ ವಿವರ:

ಮುಂಬೈ ಮೊದಲ ಇನಿಂಗ್ಸ್‌ : 224/10 (64.3 ಓವರ್‌) (ತುಷಾರ್ 75, ಯಶ್ ಠಾಕೂರ್ 54/3)

ವಿದರ್ಭ ಮೊದಲ ಇನಿಂಗ್ಸ್ : 105/10 (64.3 ಓವರ್‌) (ಯಷ್ ರಾಥೋಡ್ 27, ಕೋಟಿಯನ್ 7/3)

ಮುಂಬೈ ಎರಡನೇ ಇನಿಂಗ್ಸ್ : 418/10 (130.2 ಓವರ್‌) (ಮುಷೀರ್ ಖಾನ್ 136, ಶ್ರೇಯಸ್ 95, ರಹಾನೆ 73, ಹರ್ಷ್‌ ದುಬೆ 144/5)

ವಿದರ್ಭ ಎರಡನೇ ಇನಿಂಗ್ : 368/10 (134.3 ಓವರ್‌) (ವಾಡ್ಕರ್‌ 102. ಕೋಟಿಯನ್ 95/4)

ಪಂದ್ಯ ಶ್ರೇಷ್ಠ: ಮುಷೀರ್‌ ಖಾನ್‌
ಸರಣಿ ಶ್ರೇಷ್ಠ: ತನುಷ್ ಕೋಟ್ಯಾನ್

https://x.com/BCCIdomestic/status/1768182725377397038?s=20

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago