ಮುಂಬೈ (ಪಿಟಿಐ); ಶಿವಸೇನಾ (ಠಾಕ್ರೆ ಬಣ ) ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮಿತ್ರಪಕ್ಷಗಳು ಭಿನ್ನಾಭಿಪ್ರಾಯ ಹೊಂದಿದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಮಿತ್ರಪಕ್ಷಗಳ ನಡುವಿನ ಒಗ್ಗಟ್ಟಿನ ವಿಷಯವನ್ನು ಚರ್ಚಿಸಲಾಗಿದೆ ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದರು.
ಮೈತ್ರಿಕೂಟದ ಏಕತೆಗಾಗಿ ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಇದಕ್ಕೆ ನಾವು ಒಪ್ಪಿಕೊಂಡಿದ್ದೇವೆ ಎಂದರು.
ಅದಾನಿ ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಬದಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸಮಿತಿಯಿಂದ ತನಿಖೆಗೆ ಎನ್ಸಿಪಿ ಮುಖ್ಯಸ್ಥರು ಒಲವು ತೋರಿದ ಕೆಲ ದಿನಗಳ ನಂತರ ಪವಾರ್ ಮತ್ತು ಠಾಕ್ರೆ ನಡುವಿನ ಸಭೆ ನಡೆದಿದೆ.
ಜೆಪಿಸಿ ತನಿಖೆಗೆ ಕಾಂಗ್ರೆಸ್, ಶಿವಸೇನಾ ಒತ್ತಾಯಿಸುತ್ತಿವೆ. ವಿರೋಧ ಪಕ್ಷಗಳ ಈ ಬೇಡಿಕೆಗೆ ಎನ್ಸಿಪಿಯ ಸಮ್ಮತಿ ಇಲ್ಲದಿದ್ದರೂ ವಿಪಕ್ಷಗಳ ಒಗ್ಗಟ್ಟಿನ ಹಿತದೃಷ್ಟಿಯಿಂದ ಅವರ ನಿಲುವಿನ ವಿರುದ್ಧ ಹೋಗುವುದಿಲ್ಲ ಎಂದು ಶರದ್ ಪವಾರ್ ತಿಳಿಸಿದ್ದರು.
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…