ಮುಂಬೈ (ಪಿಟಿಐ); ಶಿವಸೇನಾ (ಠಾಕ್ರೆ ಬಣ ) ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮಿತ್ರಪಕ್ಷಗಳು ಭಿನ್ನಾಭಿಪ್ರಾಯ ಹೊಂದಿದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಮಿತ್ರಪಕ್ಷಗಳ ನಡುವಿನ ಒಗ್ಗಟ್ಟಿನ ವಿಷಯವನ್ನು ಚರ್ಚಿಸಲಾಗಿದೆ ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದರು.
ಮೈತ್ರಿಕೂಟದ ಏಕತೆಗಾಗಿ ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಇದಕ್ಕೆ ನಾವು ಒಪ್ಪಿಕೊಂಡಿದ್ದೇವೆ ಎಂದರು.
ಅದಾನಿ ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಬದಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸಮಿತಿಯಿಂದ ತನಿಖೆಗೆ ಎನ್ಸಿಪಿ ಮುಖ್ಯಸ್ಥರು ಒಲವು ತೋರಿದ ಕೆಲ ದಿನಗಳ ನಂತರ ಪವಾರ್ ಮತ್ತು ಠಾಕ್ರೆ ನಡುವಿನ ಸಭೆ ನಡೆದಿದೆ.
ಜೆಪಿಸಿ ತನಿಖೆಗೆ ಕಾಂಗ್ರೆಸ್, ಶಿವಸೇನಾ ಒತ್ತಾಯಿಸುತ್ತಿವೆ. ವಿರೋಧ ಪಕ್ಷಗಳ ಈ ಬೇಡಿಕೆಗೆ ಎನ್ಸಿಪಿಯ ಸಮ್ಮತಿ ಇಲ್ಲದಿದ್ದರೂ ವಿಪಕ್ಷಗಳ ಒಗ್ಗಟ್ಟಿನ ಹಿತದೃಷ್ಟಿಯಿಂದ ಅವರ ನಿಲುವಿನ ವಿರುದ್ಧ ಹೋಗುವುದಿಲ್ಲ ಎಂದು ಶರದ್ ಪವಾರ್ ತಿಳಿಸಿದ್ದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…