BREAKING NEWS

ಬಿಜೆಪಿ ಹೈಕಮಾಂಡ್‌ ಜೊತೆ ಮುನಿಸು: ಗಡ್ಕರಿ ರಾಜಕೀಯ ನಿವೃತ್ತಿ.?

ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ.

ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ 2024ರ ಚುನಾವಣೆಯಲ್ಲಿ ಗಡ್ಕರಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, ತಾವು ಎರಡು ಚುನಾವಣೆಗಳನ್ನು ಗೆದ್ದಿದ್ದರೂ, ಜನರಿಗೆ ತಾನು ಯೋಗ್ಯ ಎನಿಸಿದರೆ ಮಾತ್ರವೇ ವೋಟ್ ಮಾಡಲಿ ಎಂದಿದ್ದಾರೆ. ಒಂದು ಮಿತಿಯನ್ನು ದಾಟಿ ನಾನು ಯಾರನ್ನೂ ಓಲೈಸಲು ಹೋಗುವುದಿಲ್ಲ. ಒಂದು ವೇಳೆ, ನನ್ನ ಜಾಗದಲ್ಲಿ ಮತ್ತೊಬ್ಬರು ಯಾರೇ ಬಂದರೂ ಪರ್ವಾಗಿಲ್ಲ. ಆಗಲೂ ನಾನು ನನ್ನ ಕೆಲಸಕ್ಕೆ ಹೆಚ್ಚು ಸಮಯವನ್ನು ಕೊಡುತ್ತೇನೆ ಎಂದು ಗಡ್ಕರಿ ಅವರು ಹೇಳಿದ್ದರು.

ಇದೇ ವೇಳೆ, ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ. ಗಡ್ಕರಿ ಅವರು ಮತಗಳನ್ನು ಪಡೆಯಲು ಓಲೈಕೆ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆಂದು ಗಡ್ಕರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಸಾರ್ವಜನಿಕ ವೇದಿಕೆಯಲ್ಲಿ ಇದೇ ರೀತಿಯಲ್ಲಿ ಗಡ್ಕರಿ ಅವರು ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದರು. ಜನವರಿ ತಿಂಗಳಲ್ಲಿ ಆಯೋಜಿಸಲಾಗಿದ್ದ ಹಬ್ಬಾ ಆದಿವಾಸಿ ಮಹಾಸಂಘ ಸದಸ್ಯರ ಸಭೆಯಲ್ಲಿ ಅವರು, ನೀವು ಯಾರಿಗೆ ಬೇಕಾದರೂ ವೋಟ್ ಮಾಡಬಹುದು ಅದು ನಿಮಗೆ ಬಿಟ್ಟ ವಿಷಯ ಎಂದು ಹೇಳಿದ್ದರು. ಆ ಮೂಲಕ ನಾನಾ ಊಹೆಗಳಿಗೆ ಅವಕಾಶ ಕಲ್ಪಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಅವರು ಇದೇ ರೀತಿ ಆಗಿ ಹೇಳಿದ್ದರು. ಕೆಲವೊಮ್ಮೆ ರಾಜಕೀಯ ನಿವೃತ್ತಿಯನ್ನು ತೆಗೆದುಕೊಳ್ಳಬೇಕು ಎನಿಸುತ್ತದೆ ಎಂದು ಹೇಳಿದ್ದರು. ಇದು ಕೂಡ ಭಾರೀ ಸುದ್ದಿಯಾಗಿತ್ತು.

andolanait

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

8 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

8 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

9 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

9 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

9 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

10 hours ago