ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ.
ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ 2024ರ ಚುನಾವಣೆಯಲ್ಲಿ ಗಡ್ಕರಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, ತಾವು ಎರಡು ಚುನಾವಣೆಗಳನ್ನು ಗೆದ್ದಿದ್ದರೂ, ಜನರಿಗೆ ತಾನು ಯೋಗ್ಯ ಎನಿಸಿದರೆ ಮಾತ್ರವೇ ವೋಟ್ ಮಾಡಲಿ ಎಂದಿದ್ದಾರೆ. ಒಂದು ಮಿತಿಯನ್ನು ದಾಟಿ ನಾನು ಯಾರನ್ನೂ ಓಲೈಸಲು ಹೋಗುವುದಿಲ್ಲ. ಒಂದು ವೇಳೆ, ನನ್ನ ಜಾಗದಲ್ಲಿ ಮತ್ತೊಬ್ಬರು ಯಾರೇ ಬಂದರೂ ಪರ್ವಾಗಿಲ್ಲ. ಆಗಲೂ ನಾನು ನನ್ನ ಕೆಲಸಕ್ಕೆ ಹೆಚ್ಚು ಸಮಯವನ್ನು ಕೊಡುತ್ತೇನೆ ಎಂದು ಗಡ್ಕರಿ ಅವರು ಹೇಳಿದ್ದರು.
ಇದೇ ವೇಳೆ, ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ. ಗಡ್ಕರಿ ಅವರು ಮತಗಳನ್ನು ಪಡೆಯಲು ಓಲೈಕೆ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆಂದು ಗಡ್ಕರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಸಾರ್ವಜನಿಕ ವೇದಿಕೆಯಲ್ಲಿ ಇದೇ ರೀತಿಯಲ್ಲಿ ಗಡ್ಕರಿ ಅವರು ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದರು. ಜನವರಿ ತಿಂಗಳಲ್ಲಿ ಆಯೋಜಿಸಲಾಗಿದ್ದ ಹಬ್ಬಾ ಆದಿವಾಸಿ ಮಹಾಸಂಘ ಸದಸ್ಯರ ಸಭೆಯಲ್ಲಿ ಅವರು, ನೀವು ಯಾರಿಗೆ ಬೇಕಾದರೂ ವೋಟ್ ಮಾಡಬಹುದು ಅದು ನಿಮಗೆ ಬಿಟ್ಟ ವಿಷಯ ಎಂದು ಹೇಳಿದ್ದರು. ಆ ಮೂಲಕ ನಾನಾ ಊಹೆಗಳಿಗೆ ಅವಕಾಶ ಕಲ್ಪಿಸಿದ್ದರು.
ಕಳೆದ ವರ್ಷ ಜುಲೈನಲ್ಲಿ ಅವರು ಇದೇ ರೀತಿ ಆಗಿ ಹೇಳಿದ್ದರು. ಕೆಲವೊಮ್ಮೆ ರಾಜಕೀಯ ನಿವೃತ್ತಿಯನ್ನು ತೆಗೆದುಕೊಳ್ಳಬೇಕು ಎನಿಸುತ್ತದೆ ಎಂದು ಹೇಳಿದ್ದರು. ಇದು ಕೂಡ ಭಾರೀ ಸುದ್ದಿಯಾಗಿತ್ತು.
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…